ಚಾಮರಾಜನಗರ ದಸರಾ ಮಹೋತ್ಸವ ಅದ್ದೂರಿಯಾಗಿ ನಡೆದ ಯುವ ದಸರಾ, ನಕ್ಕು ನಗಿಸಿದ ಮಿಮಿಕ್ರಿ ಗೋಪಿ ಮಂಗಳವಾರ ರಾತ್ರಿ ಹತ್ತು ಗಂಟೆ ಸಮಯದಲ್ಲಿ ಚಾಮರಾಜನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಚಾಮರಾಜನಗರ ಜಿಲ್ಲಾ ದಸರಾ ಮಹೋತ್ಸವ ಎರಡನೇ ದಿನದಲ್ಲಿ ಅದ್ದೂರಿಯಾಗಿ ವಿವಿಧ ಕಾರ್ಯಕ್ರಮಗಳು ನಡೆದವು. ಮಿಮಿಕ್ರಿ ಗೋಪಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಡಾ.ರಾಜ್ ಕುಮಾರ್ ಶಂಕರ್ ನಾಗ್, ಅಂಬರೀಶ್, ಹಾಗೂ ವಾಟಲ್ ನಾಗರಾಜ್ ಅವರ ಧ್ವನಿಯಲ್ಲಿ ಮಾತನಾಡಿ ಪ್ರೇಕ್ಷಕರನ್ನು ರಂಜಿಸಿದರು.