571313ಸೋಮವಾರಪೇಟೆ ಬಡಾವಣೆಯಲ್ಲಿ ಮೂರನೇ ಹೆಬ್ಬಾವು ಪ್ರತ್ಯಕ್ಷ, ಭಯಭೀತರಾದ ನಿವಾಸಿಗಳು
Chamarajanagar, Karnataka:ಚಾಮರಾಜನಗರದ ಸೋಮವಾರಪೇಟೆ ಬಡಾವಣೆಯ ಎಚ್ ಪಿ ಪೆಟ್ರೋಲ್ ಬಂಕ್ ಬಳಿ ಸುಮಾರು 10-15 ಅಡಿ ಉದ್ದದ ಹೆಬ್ಬಾವು ಪ್ರತ್ಯಕ್ಷವಾಗಿದೆ. ಹೆಬ್ಬಾವು ಬಂಕ್ ಬಳಿ ಇರುವ ಪಂಚರ್ ಶಾಪ್ ಹಾಗೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುತಿದೆ. ಬಳಿಕ ಸ್ಥಳೀಯರು ಭಯಭೀತರಾಗಿ ಉರಗಪ್ರೇಮಿ ಸ್ನೇಕ್ ಅಶೋಕ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಇನ್ನೂ ಸ್ಥಳಕ್ಕೆ ಆಗಮಿಸಿದ ಸ್ನೇಕ್ ಅಶೋಕ್ ಹೆಬ್ಬಾವನ್ನು ರಕ್ಷಣೆ ಮಾಡಿ ನಂತರ ಕಾಡಿಗೆ ಬಿಟ್ಟಿದ್ದಾರೆ. ಇನ್ನೂ ಸೋಮವಾರಪೇಟೆ ಬಡಾವಣೆಯಲ್ಲಿ ಇದು ಮೂರನೇ ಹೆಬ್ಬಾವು ಪ್ರತ್ಯಕ್ಷವಾಗಿದ್ದು ನಿವಾಸಿಗಳಲ್ಲಿ ಭಯ ಉಂಟುಮಾಡಿದೆ.
0
571313ರಾಹುಲ್ ಗಾಂಧಿ ಮೀಸಲಾತಿ ವಿರೋಧಿ ಮನಸ್ಥಿತಿ ಇರುವ ವ್ಯಕ್ತಿ ನಗರದಲ್ಲಿ ಮಾಜಿ ಸಚಿವ ಎನ್.ಮಹೇಶ್
Chamarajanagar, Karnataka:ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವ ಎನ್.ಮಹೇಶ್ ಮಾತನಾಡಿ ಅಮೆರಿಕ ಪ್ರವಾಸದಲ್ಲಿರುವ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಕುರಿತು ನೀಡಿರುವ ಹೇಳಿಕೆ ಸಂವಿಧಾನ ವಿರೋಧಿ ಹೇಳಿಕೆ, ಬಿಜೆಪಿಯವರು ಸಂವಿಧಾನ ವಿರೋಧಿಗಳು ಅಂತ ಟೀಕೆ ಮಾಡುತ್ತಾರೆ ಆದರೆ ನಿಜವಾದ ಸಂವಿಧಾನ ವಿರೋಧಿಗಳು ಕಾಂಗ್ರೆಸ್ ಪಕ್ಷದವರು.
ರಾಹುಲ್ ನೀಡಿರುವ ಹೇಳಿಕೆ ಅವಿವೇಕಿದತನದ ಹೇಳಿಕೆ. ನಾಳೆ ನಗರದಲ್ಲಿ ಕಾಂಗ್ರೆಸ್ ಹಟಾವೋ ಸಂವಿಧಾನ ಬಚಾವೋ ಅಭಿಯಾನದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
0
571313ನಗರದಲ್ಲಿ ಚಾಲಕನಿಗೆ ಚಾಕುವಿನಿಂದ ಹಲ್ಲೆ ಮಾಡಿದ ಯುವಕರು, ಸಿಸಿ ಟಿವಿ ವೀಡಿಯೋ ವೈರಲ್
Chamarajanagar, Karnataka:ಚಾಮರಾಜನಗರ ಸತ್ತಿ ರಸ್ತೆಯಲ್ಲಿರುವ ಹೆಚ್.ಪಿ ಪೆಟ್ರೋಲ್ ಬಂಕ್ ಬಳಿ ಮಂಗಳವಾರ ರಾತ್ರಿ ಕಾರಿನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ನಾಲ್ವರು ಮುಸ್ಲಿಂ ಯುವಕರು ಅಡ್ಡ ಹಾಕಿ ಹಲ್ಲೆ ಮಾಡಿ ಚಾಕುವಿನಿಂದ ತಲೆಗೆ ಚುಚ್ಚಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ
ಬೈಕ್ ನಲ್ಲಿ ಬಂದ ನಾಲ್ವರು ಯುವಕರು ಕಾರು ಚಾಲಕ ಪ್ರಭು ಅವರಿಗೆ ಹಲ್ಲೆ ಮಾಡಿದ ನಾಲ್ವರು ಯುವಕರು ಮೇಲೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು.
ಮುಂದಿನ ಕ್ರಮ ಕೈಗೊಂಡಿದ್ದಾರೆ
0
571313ನಗರಸಭೆ ಅಧ್ಯಕ್ಷರಾಗಿ ಸುರೇಶ್, ಉಪಾಧ್ಯಕ್ಷರಾಗಿ ಮಮತ ಆಯ್ಕೆ, ಕಾಂಗ್ರೆಸ್ ಗೆ ಮುಖಭಂಗ
Chamarajanagar, Karnataka:ಚಾಮರಾಜನಗರ ನಗರಸಭೆ ಕಚೇರಿಯ ಸಭಾಂಗಣದಲ್ಲಿ ನಗರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ರಾಜಪ್ಪ ಅಧ್ಯಕ್ಷ ಸ್ಥಾನಕ್ಕ ಹಾಗೂ ಎಸ್ಡಿಪಿಐ ಪಕ್ಷದಿಂದ ಅಬ್ರಾರ್ ಮಹಮ್ಮದ್ ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು.
ಬಿಜೆಪಿಯಿಂದ ಸುರೇಶ್ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮಮತ ನಾಮಪತ್ರ ಸಲ್ಲಿಸಿದರು.
ಬಿಜೆಪಿ 15 ಮತಗಳನ್ನು ಪಡೆದುಕೊಂಡು ಗೆಲವು ಸಾಧಿಸಿತು.
ಕಾಂಗ್ರೆಸ್ 14 ಮತಗಳನ್ನು ಪಡೆದುಕೊಂಡು ಒಂದು ಮತದ ಅಂತರದಿಂದ ಸೋಲು ಅನುಭವಿಸಿ ಕಾಂಗ್ರೆಸ್ ಮುಖಭಂಗವಾಗಿದೆ.
0
571313ಸೋಮವಾರಪೇಟೆ ಬಡಾವಣೆಯಲ್ಲಿ ಮತ್ತೊಂದು ಹೆಬ್ಬಾವು ಪ್ರತ್ಯಕ್ಷ, ಭಯಭೀತರಾದ ನಿವಾಸಿಗಳು
Chamarajanagar, Karnataka:ಚಾಮರಾಜನಗರದ ಸೋಮವಾರಪೇಟೆ ಬಡಾವಣೆಯ ಎಚ್ ಪಿ ಪೆಟ್ರೋಲ್ ಬಂಕ್ ಬಳಿ ಸುಮಾರು 15 ಅಡಿ ಉದ್ದದ ಹೆಬ್ಬಾವು ಕಾಣಿಸಿಕೊಂಡಿದೆ. ಹೆಬ್ಬಾವು ಬಂಕ್ ಮುಂದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡುತ್ತಿತ್ತು. ಸ್ಥಳೀಯರು ಹೆಬ್ಬಾವನ್ನು ನೋಡಿ ಭಯಗೊಂಡು ಉರಗಪ್ರೇಮಿ ಸ್ನೇಕ್ ಅಶೋಕ್ ಅವರಿಗೆ ಕರೆ ಮಾಡಿದರು. ಸ್ನೇಕ್ ಅಶೋಕ್ ಸ್ಥಳಕ್ಕೆ ಬಂದು ಹೆಬ್ಬಾವನ್ನು ರಕ್ಷಿಸಿ ಕಾಡಿಗೆ ಬಿಟ್ಟಿದ್ದಾರೆ. ಸೋಮವಾರಪೇಟೆ ಬಡಾವಣೆಯಲ್ಲಿ ಇನ್ನೂ ಎರಡು ಹೆಬ್ಬಾವು ಕಾಣಿಸಿಕೊಂಡಿದ್ದು, ಇದರಿಂದ ಸ್ಥಳೀಯರಲ್ಲಿ ಭಯ ಉಂಟಾಗಿದೆ.
0