574325
Karnataka News: ಹತ್ಯೆಗೀಡಾದ ರಹ್ಮಾನ್ ಸ್ಮರಣೆಯಲ್ಲಿ ರಕ್ತದಾನ ಶಿಬಿರ
Budoli, Karnataka:ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಕೊಲೆಯಾದ ಅಬ್ದುಲ್ ರೆಹಮಾನ್ ಕೊಳತ್ತಮಜಲು ಇವರ ಸ್ಮರಣಾರ್ಥ GHM ಫೌಂಡೇಶನ್ ಹಾಗೂ ಮುಹಿಯುದ್ದೀನ್ ಜುಮಾ ಮಸ್ಜಿದ್ ಕೊಳ್ತಮಜಲು, ಎಸ್ ಕೆ ಎಸ್ ಎಸ್ ಎಫ್ ಇವರ ಸಹಯೋಗದಿಂದ ಬ್ಲಡ್ ಡೊನೇಷನ್ ಕ್ಯಾಂಪ್ ಇಂದು ಕೊಳತ್ತಮಜಲು ಮದ್ರಸಾ ಸಭಾಂಗಣದಲ್ಲಿ ನಡೆಯಿತು. ಇದೇ ವೇಳೆ ಜಾತಿ, ಧರ್ಮ ನೋಡದೆ ಸರ್ವಧರ್ಮೀಯರು ಬಂದು ರಕ್ತದಾನ ಮಾಡಿರುವುದು ವಿಶೇಷ ಆಗಿತ್ತು.0
0
Report
575001
ದ್ವಿತೀಯ ಪಿ.ಯು.ಸಿ ಪರೀಕ್ಷೆ- 3: ನಿಷೇಧಾಜ್ಞೆ ಜಾರಿ
Mangaluru, Karnataka:ಜೂನ್ 9 ರಿಂದ ಜೂನ್ 20 ರವರೆಗೆ ದ್ವಿತೀಯ ಪಿ.ಯು.ಸಿ ಪರೀಕ್ಷೆ- 3 ನಡೆಯಲಿದ್ದು, ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಜೂನ್ 9 ರಿಂದ ಜೂನ್ 20 ರವರೆಗೆ ಪರೀಕ್ಷೆ- 3 ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸ್ ವ್ಯಾಪ್ತಿಯ ಪುತ್ತೂರು ತಾಲೂಕಿನ ದರ್ಬೆ ಸೈಂಟ್ ಫಿಲೋಮಿನಾ ಪಿ.ಯು ಕಾಲೇಜು, ಬೆಳ್ತಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಸುಳ್ಯ ತಾಲೂಕಿನ ಗಾಂಧಿನಗರ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಂಟ್ವಾಳ ತಾಲೂಕಿನ ಬಿ ಮೂಡಾ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿμÉೀಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ ಆದೇಶಿಸಿದ್ದಾರೆ.0
0
Report
575001
ನದಿ ಮಾಲಿನ್ಯ - ತಕ್ಷಣ ನಿಯಂತ್ರಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ
Mangaluru, Karnataka:ಸುರತ್ಕಲ್ ಖಂಡಿಗೆ ನಂದಿನಿ ನದಿ ತ್ಯಾಜ್ಯದಿಂದ ಮಾಲಿನ್ಯವಾಗುತ್ತಿರುವ ಬಗ್ಗೆ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಬುಧವಾರ ಸ್ಥಳಕ್ಕೆ ಭೇಟಿ ನೀಡಿದರು. ನಂದಿನಿ ನದಿ ಸೇತುವೆಯಲ್ಲಿ ನಿಂತು ಪರಿಶೀಲನೆ ನಡೆಸಿದ ಅವರು ಸ್ಥಳೀಯರ ಅಹವಾಲು ಆಲಿಸಿದರು. ಕಳೆದ ಹಲವು ವರ್ಷಗಳಿಂದ ನದಿಗೆ ಸ್ಥಳೀಯ ವೈದ್ಯಕೀಯ ಕಾಲೇಜಿನಿಂದ ತ್ಯಾಜ್ಯ ಹರಿದು ಬರುತ್ತಿದೆ. ಸುರತ್ಕಲ್ ವೆಟ್ ವೆಲ್ ನಿಂದಲೂ ತ್ಯಾಜ್ಯವನ್ನು ನೇರವಾಗಿ ಬಿಡಲಾಗುತ್ತಿದೆ ಎಂದು ಸಾರ್ವಜನಿಕರು ಸಚಿವರಿಗೆ ಅಹವಾಲು ಸಲ್ಲಿಸಿದರು. ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ನದಿ ಮಾಲಿನ್ಯದಿಂದ ಸ್ಥಳೀಯರಿಗೆ ತೀವ್ರ ಸಮಸ್ಯೆ ಆಗಿದೆ. ಇದಕ್ಕೆ ಸಾರ್ವಜನಿಕರು ಹಲವು ಬಾರಿ ಸಂಬಂಧಿಸಿದವರ ಗಮನಕ್ಕೆ ತಂದಿದ್ದರೂ ಸಮಸ್ಯೆ ಪರಿಹಾರವಾಗಿಲ್ಲ ಎಂದು ಸಚಿವರಿಗೆ ತಿಳಿಸಿದರು.0
0
Report
Advertisement
575001
ಕಿನ್ನಿಗೋಳಿ : ಉಸ್ತುವಾರಿ ಸಚಿವರಿಂದ ಸಾರ್ವಜನಿಕ ಅಹವಾಲು ಸ್ವೀಕಾರ
Mangaluru, Karnataka:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬುಧವಾರ ಕಿನ್ನಿಗೋಳಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿದರು. ಕಿನ್ನಿಗೋಳಿ ಚರ್ಚ್ ಹಾಲ್ನಲ್ಲಿ ನಡೆದ ಕಾರ್ಯಕ್ರಮವನ್ನು ಸಚಿವರು ಉದ್ಘಾಟಿಸಿ ಮಾತನಾಡಿ, ರಾಜ್ಯದ ಎಲ್ಲಾ ತಾಲೂಕು ಮತ್ತು ಹೋಬಳಿ ಕೇಂದ್ರಗಳಲ್ಲಿ ಜನತಾದರ್ಶನ ನಡೆಸಿ ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಅದರಂತೆ ವಿವಿಧ ಪೇಟೆ ಪಟ್ಟಣಗಳಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕ ಆಹಾರ ಸ್ವೀಕರಿಸಲಾಗುತ್ತದೆ ಎಂದು ಅವರು ಹೇಳಿದರು. ಜನತಾದರ್ಶನದಲ್ಲಿ ಸ್ವೀಕರಿಸಿದ ಸಾರ್ವಜನಿಕ ಅಹವಾಲುಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಮತ್ತು ಪರಿಹಾರ ಕ್ರಮಗಳನ್ನು ಒದಗಿಸಬೇಕು. ಇದರಲ್ಲಿ ವಿಳಂಬ ಸಹಿಸುವುದಿಲ್ಲ ಎಂದು ಸಚಿವರು ತಿಳಿಸಿದರು. ಅಭಿವೃದ್ಧಿಯಲ್ಲಿ ಎಲ್ಲಾ ಪ್ರದೇಶಗಳನ್ನು ಸಮಾನವಾಗಿ ಕಾಣಲಾಗುವುದು. ಕೊರತೆಗಳಿದ್ದರೆ ಅವುಗಳನ್ನು ಸರಿಪಡಿಸಲಾಗುವುದೆಂದು ಸಚಿವರು ತಿಳಿಸಿದರು.0
0
Report
575001
ಇಂದಿರಾ ಕ್ಯಾಂಟೀನ್ ದೇಶದಲ್ಲಿಯೇ ಮಾದರಿ ಕಾರ್ಯಕ್ರಮ: ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್
Mangaluru, Karnataka:ಇಂದಿರಾ ಕ್ಯಾಂಟೀನ್ನಲ್ಲಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರವನ್ನು ಒದಗಿಸುವ ಮೂಲಕ ಬಡವರಿಗೆ ಮತ್ತು ಕಾರ್ಮಿಕರಿಗೆ ನೈಜ ಲಾಭ ಒದಗಿಸುವ ದೇಶದ ಮಾದರಿ ಕಾರ್ಯಕ್ರಮವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಅವರು ಬುಧವಾರ ಮೂಡಬಿದ್ರೆ, ಕಿನ್ನಿಗೋಳಿ, ಮುಲ್ಕಿ ವಿವಿಧೆಡೆ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದರು. ಸಚಿವರು ಮೂಡಬಿದ್ರೆಯಲ್ಲಿ ಮಾತನಾಡಿ ಸರ್ಕಾರದ ಯೋಜನೆಗಳ ಲಾಭವು ನೇರವಾಗಿ ಬಡವರಿಗೆ ತಲುಪಬೇಕು ಎಂಬುದು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಧ್ಯೇಯವಾಗಿತ್ತು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಾಲ್ಯದಲ್ಲಿ ತಾವು ಅನುಭವಿಸಿದ ಹಸಿವಿನ ಸಂಕಟವನ್ನು ಗಮನದಲ್ಲಿಟ್ಟುಕೊಂಡು ಬಡಜನರು ಮತ್ತು ದುರ್ಬಲರು ಹಸಿವಿನಿಂದ ಇರಬಾರದು ಮತ್ತು ಸರಕಾರದ ಯೋಜನೆಗಳ ಲಾಭ ನೇರವಾಗಿ ತಲುಪಬೇಕು ಎಂಬ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಸ್ಥಾಪಿಸಿದರು ಎಂದು ಅವರು ಹೇಳಿದರು.0
0
Report
