icon-pinewzicon-zee
PINEWZ
become creator
Become a News Creator

Your local stories, Your voice

Follow us on
Download App fromplay-storeapp-store
Advertisement
Pinewz
587102
SomashekharSomashekharFollow15 Jun 2025, 03:19 pm

ರಾಜ್ಯದಲ್ಲೂ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ:ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ ವಿಶ್ವಾಸ

Bagalkote, Karnataka:ಬರುವ 2028ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ಆರಂಭಿಸಲಾಗಿದೆ ಎಂದು ಕೆಪಿಸಿಸಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಎಚ್. ಎಸ್. ಮಂಜುನಾಥ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯುವ ಕಾಂಗ್ರೆಸ್ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದ ನಂತರ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿದ್ದೇನೆ. ಎಲ್ಲೆಡೆ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ, ಉಮ್ಮಸ್ಸು ಕಂಡುಬಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಾರಿಗೆ ತಂದ ಐದು ಗ್ಯಾರಂಟಿಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯಕ್ಕೆ ಯುವ ಕಾಂಗ್ರೆಸ್ ಮುಂದಾಗಬೇಕು. ಮುಂದಿನ ಚುನಾವಣೆಗೂ ಸಜ್ಜಾಗಬೇಕು ಎಂದರು. ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ ಸೂಚನೆಯಂತೆ ಈಗಿನಿಂದಲೇ ಸಂಘಟನೆ ಸದೃಢಗೊಳಿಸಿ 2028ರ ಚುನಾವಣೆಗೆ ಬಿರುಸಿನ ತಯಾರಿ ನಡೆಯುತ್ತಿದೆ ಎಂದ ಅವರು, “ಜಮಖಂಡಿಯಲ್ಲಿ ನಮಗೆ ನೀಡಿದ ಅದ್ಭುತ ಸ್ವಾಗತದಿಂದ ಈ ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಎಷ್ಟು ಬಲಿಷ್ಠವಾಗಿದೆ ಎಂಬುದು ಸಾಬೀತಾಗಿದೆ” ಎಂದು ಹೇಳಿದರು.
0
0
Report
Pinewz
587102
SomashekharSomashekharFollow15 Jun 2025, 03:16 pm

ಬಾಗಲಕೋಟೆ ನಗರದಲ್ಲಿ ಯಶಸ್ವಿಯಾಗಿ ಜರುಗಿದ ಯುವ ಕಾಂಗ್ರೆಸ್ ಜಿಲ್ಲಾ ಸಮೀತಿಯ ಕಾರ್ಯಕಾರಿಣಿ ಸಭೆ

Bagalkote, Karnataka:ಬಾಗಲಕೋಟೆ ಯುವ ಕಾಂಗ್ರೆಸ್ ಜಿಲ್ಲಾ ಸಮಿತಿ ಬಾಗಲಕೋಟ ವತಿಯಿಂದ ಬಾಗಲಕೋಟೆ ನಗರದ ಖಾಸಗಿ ರೆಸಾರ್ಟ್ ನಲ್ಲಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಎಚ್ಎಸ್ ಮಂಜುನಾಥಗೌಡ ಅವರ ಅಧ್ಯಕ್ಷತೆಯಲ್ಲಿ ಯುವ ಕಾಂಗ್ರೆಸ್ ಕರ್ನಾಟಕ ಉಸ್ತುವಾರಿಗಳಾದ ನಿಗಮ್ ಭಂಡಾರಿ ಜಿ ಹಾಗೂ ರಾಜ್ಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿನಯ್ ತಿಮ್ಮಾಪುರ್ ಅವರ ನೇತೃತ್ವದಲ್ಲಿ ಬಾಗಲಕೋಟೆ ಜಿಲ್ಲಾ ಕಾರ್ಯಕಾರಿಣಿ ಸಭೆ ಜರುಗಿತು. ಸಭೆಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷರು ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿಗಳಾದ ಅಬ್ದುಲ್ ದೇಸಾಯಿ, ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ದೀಪಕ್ , ಉಪಾಧ್ಯಕ್ಷರಾದ ಮಂಜುನಾಥ್ ಮುಚಖಂಡಿ, ಬಾಗಲಕೋಟೆ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ನಂಜಯ್ಯನಮಠ, ಜಿಲ್ಲಾ ಎಸ್ ಸಿ ಬ್ಲಾಕ್ ಅಧ್ಯಕ್ಷ ರಾಜು ಮನ್ನಿಕೆರಿ ರವರು, ಸೇರಿ ಎಲ್ಲಾ ಜಿಲ್ಲಾ, ತಾಲೂಕ, ಬ್ಲಾಕ್ ಮಟ್ಟದ ಪದಾಧಿಕಾರಿಗಳು ಪಾಲ್ಗೊಂಡು ಕಾರ್ಯಕಾರಿಣಿ ಸಭೆ ಯಶಸ್ವಿಗೊಳಿಸಿದರು.
0
0
Report
Advertisement
Advertisement
Back to top