Back
Surendra
Chamarajanagar571313

Chamarajanagar: ಕಳ್ಳರು ಮನೆಗಳಿಗೆ ಕನ್ನ ಹಾಕಿ 1.5 ಲಕ್ಷ ನಗದು ಕಳವು

SurendraSurendraMay 21, 2025 06:01:26
Chamarajanagar, Karnataka:

ಕಳ್ಳರು ಕೈ ಚಳಕ ತೋರಿ ಸರಣಿ ಮನೆಗಳಿಗೆ ಕನ್ನ ಹಾಕಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿಯಲ್ಲಿ ನಡೆದಿದ್ದು ಬುಧವಾರ ಬೆಳಗ್ಗೆ ತಿಳಿದುಬಂದಿದೆ. ತೆರಕಣಾಂಬಿ ಗ್ರಾಮದ ಕುಮಾರ್, ರವಿ, ರೇಷ್ಮಾ, ನಾಗರಾಜ್ ಹಾಗೂ ಪುಟ್ಟದೇವಮ್ಮ ಎಂಬವರ ಮನೆಗಳ ಬೀಗ ಒಡೆದು ನಗದು ಹಾಗೂ ಚಿನ್ನಾಭರಣ ಕಳವು ಮಾಡಿದ್ದಾರೆ.ಮನೆಗಳಲ್ಲಿ ಯಾರು ಇಲ್ಲದ ಸಮಯ ನೋಡಿ ಕಳ್ಳತನ ಮಾಡಿದ್ದು ಕುಮಾರ್ ಎಂಬವರ ಮನೆಯಲ್ಲಿ ಒಂದೂವರೆ ಲಕ್ಷ ನಗದು, ಹತ್ತು ಗ್ರಾಂ ಚಿನ್ನ ಕಳುವು ಮಾಡಿದ್ದು ಉಳಿದ ಮನೆಗಳಲ್ಲಿ ಕಳವಾದ ವಸ್ತುಗಳ ಬಗ್ಗೆ ಇನ್ನಷ್ಟೇ ತಿಳಿದುಬರಬೇಕಿದೆ‌.

0
Report
Chamarajanagar571111

ಗುಂಡ್ಲುಪೇಟೆ ಮೂಲಕ ವೈನಾಡಿಗೆ ಗಾಂಧಿ ಕುಟುಂಬ: ಜನರತ್ತ ಕೈ ಬೀಸಿದ ಕಾಂಗ್ರೆಸ್ ಅಧಿನಾಯಕಿ

SurendraSurendraOct 23, 2024 07:14:51
Gundlupete, Karnataka:
ಕೇರಳದ ವೈನಾಡು ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಬುಧವಾರದಂದು ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಸುವ ಹಿನ್ನೆಲೆ ಗಾಂಧಿ ಕುಟುಂಬ ಗುಂಡ್ಲುಪೇಟೆ ಮೂಲಕ ತೆರಳಿದರು. ಮೈಸೂರಿಗೆ ವಿಶೇಷ ವಿಮಾನದಲ್ಲಿ ಬಂದಿಳಿದ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಗುಂಡ್ಲುಪೇಟೆ ತಾಲೂಕಿನ ಮೂಲೆಹೊಳೆ ಚೆಕ್ ಪೋಸ್ಟ್ ಮೂಲಕ ವೈನಾಡಿಗೆ ಮಂಗಳವಾರ ಸಂಜೆ ತೆರಳಿದರು. ಇನ್ನು, ಕಾಂಗ್ರೆಸ್ ವರಿಷ್ಠರು ತೆರಳುತ್ತಿರುವ ಮಾಹಿತಿ ಅರಿತ ಕಾಂಗ್ರೆಸ್ ಕಾರ್ಯಕರ್ತರು ಗುಂಡ್ಲುಪೇಟೆಯ ರಾಷ್ಟ್ರೀಯ ಹೆದ್ದಾರಿ ಎರಡು ಬದಿ ಜಮಾಯಿಸಿದ್ದರು. ಜನರನ್ನು ಕಂಡ ಸೋನಿಯಾ ಗಾಂಧಿ ಕಾರೊಳಗೇ ಕೈ ಬೀಸುತ್ತಾ ತೆರಳಿದರು.
0
Report
Chamarajanagar571126

ಬಂಡೀಪುರದಲ್ಲಿ ಆನೆ ದಾಳಿಯಿಂದ ಬೈಕ್ ಸವಾರ ಜಸ್ಟ್ ಮಿಸ್

SurendraSurendraOct 21, 2024 14:45:20
Bandipur, Karnataka:
ಜನಪ್ರಿಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಒಂದಾಗಿರುವ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಆನೆ ದಾಳಿಯಿಂದ ಬೈಕ್ ಸವಾರ ಸ್ವಲ್ಪದರಲ್ಲೇ ಪಾರಾದ ಘಟನೆ ನಡೆದಿದೆ. ಮೈಸೂರು- ಊಟಿ ರಾಷ್ಟ್ರೀಯ ಹೆದ್ದಾರಿಯು ಬಂಡೀಪುರ ಅರಣ್ಯದ ನಡುವೆ ಹಾದುಹೋಗಿದ್ದು ಶುಕ್ರವಾರದಂದು ಊಟಿ ಕಡೆಯಿಂದ ಮೈಸೂರಿನತ್ತ ಬರುತ್ತಿದ್ದ ಬೈಕ್ ಸವಾರ ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಜೀವ ಜಲ್ಲೆನ್ನಿಸುವ ದೃಶ್ಯವನ್ನು ಕಾರಿನಲ್ಲಿದ್ದ ಪ್ರಯಾಣಿಕರು ಸೆರೆ ಹಿಡಿದಿದ್ದಾರೆ.
1
Report
Chamarajanagar571490

ಸೋಲಿಗರ ಮನೆ ನಿರ್ಮಾಣಕ್ಕೆ ಲಂಚ ಪಡೆದ ಡಿಆರ್ ಎಫ್ಒ ಲೋಕಾ ಬಲೆಗೆ

SurendraSurendraSept 19, 2024 07:26:51
Palar, Karnataka:

ಹನೂರು ತಾಲ್ಲೂಕಿನ ಪಾಲಾರ್ ಗ್ರಾಮದಲ್ಲಿ ಮನೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸೋಲಿಗ ಜನಾಂಗದ ನಿವಾಸಿಗಳಿಂದ ಲಂಚ ಕೇಳಿದ ಉಪವಲಯ ಅರಣ್ಯಾಧಿಕಾರಿ ಭೋಜಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ 18 ಆದಿವಾಸಿ ಕುಟುಂಬಗಳಿಗೆ ಮನೆಗಳನ್ನು ಮಂಜೂರಾಗಿದೆ. ಸರ್ಕಾರದ ಮೊದಲ ಕಂತಿನ ಹಣ ಬಿಡುಗಡೆಗೆ ಪ್ರತಿ ಕುಟುಂಬದವರು 1,000 ರೂ. ನೀಡಲು ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದರು. ಲೋಕಾಯುಕ್ತ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿ ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

0
Report
Advertisement
Chamarajanagar571111

ಟಿಪ್ಪರ್ ಹಾವಳಿ, ಅಕ್ರಮ ಗಣಿಗಾರಿಕೆ ವಿರುದ್ಧ ರಸ್ತೆ ತಡೆದು ಆಕ್ರೋಶ

SurendraSurendraSept 18, 2024 12:32:13
Gundlupete, Karnataka:

ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಅಕ್ರಮ ಗಣಿಗಾರಿಕೆ ಮತ್ತು ಟಿಪ್ಪರ್ ಹಾವಳಿಗೆ ವಿರೋಧವಾಗಿ ವಿವಿಧ ಕನ್ನಡ ಪರ ಹಾಗೂ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ಪಟ್ಟಣದ ಪ್ರವಾಸಿ ಮಂದಿರದಿಂದ ಹೊರಟ ಪ್ರತಿಭಟನಾ ಜಾಥಾ ಹೆದ್ದಾರಿ ಮೂಲಕ ಸಾಗಿದ್ದು, ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಮುಂದೆ ರಸ್ತೆಯನ್ನು ತಡೆದು ಮಾನವ ಸರಪಳಿ ನಿರ್ಮಿಸಿದರು. ಪ್ರತಿಭಟನಾಕಾರರು ಆರ್ಟಿಓ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ, ಪೊಲೀಸರಿಗೆ ಮತ್ತು ತಾಲ್ಲೂಕು ಆಡಳಿತಕ್ಕೆ ಧಿಕ್ಕಾರಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ನಂತರ, ತಾ. ಕಚೇರಿ ಮುಂಭಾಗ ಜಮಾಯಿಸಿ ಮುಂದುವರಿಸಿದ ಪ್ರತಿಭಟನೆ ನಡೆಯಿತು.

0
Report
Chamarajanagar571111

ಭೀಕರ ಅಪಘಾತ ಸಿಸಿಟಿವಿಯಲ್ಲಿ ಸೆರೆ; ಟಿಪ್ಪರ್ ಅಡಿ ಬೈಕ್ ಸಿಲುಕಿದ್ದರೂ ಚಾಲನೆ

SurendraSurendraSept 18, 2024 10:48:20
Gundlupete, Karnataka:

ಮಂಗಳವಾರದಂದು ಟಿಪ್ಪರ್ ಹಾಗೂ ಬೈಕ್ ಡಿಕ್ಕಿಯಾಗಿ ದಂಪತಿ ಹಾಗೂ ಮಗು ಮೃತಪಟ್ಟಿದ್ದರು. ಈ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ಲಾಗಿದೆ. ಹಿಂಬದಿಯಿಂದ ಬಂದು ಬೈಕ್ ಗೆ ಡಿಕ್ಕಿ ಹೊಡೆದ ಬಳಿಕ, ಬೈಕ್ ಸಮೇತ ಇಬ್ಬರು ಲಾರಿ ಅಡಿ ಸಿಲುಕಿದ್ದರೂ, 300 ಮೀ ನಷ್ಟು ದೂರ ಟಿಪ್ಪರ್ ಚಾಲನೆ ಮಾಡಲಾಗಿತ್ತು. ಭಯಾನಕ ದೃಶ್ಯ ಕಂಡು ಟಿಪ್ಪರ್ ನಿಲ್ಲಿಸಲು ಲಾರಿ ಹಿಂದೆ ಜನರು ಕೂಗಾಡಿ ಓಡುತ್ತಿರುವ ದೃಶ್ಯ ಸೆರೆಯಾಗಿದ್ದು ಡೆಡ್ಲಿ ಅಪಘಾತ ಕಂಡು ಜನರು ಬೆಚ್ಚಿಬಿದ್ದಿದ್ದಾರೆ.

0
Report
Chamarajanagar571127

ಕಾಡಾನೆ ರಸ್ತೆಯ ಮೇಲೆ, ವಾಹನ ಸವಾರರು ಪರದಾಡಿದ ದೃಶ್ಯ ವೈರಲ್

SurendraSurendraSept 18, 2024 10:25:22
Punajur State Forest, Karnataka:

ಕಾಡಾನೆಯೊಂದು ಆಹಾರ ಅರಸಿ ರಸ್ತೆಗಿಳಿದ ಪರಿಣಾಮ ವಾಹನ ಸವಾರರು ಪರದಾಡಿದ ಘಟನೆ ಚಾಮರಾಜನಗರ ಗಡಿಭಾಗವಾದ ತಮಿಳುನಾಡಿನ‌ ತಾಳವಾಡಿ ಸಮೀಪ ಮಂಗಳವಾರ ಸಂಜೆ ನಡೆದಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ಲಾಗಿದೆ. ಏಕಾಏಕಿ ನಡು ರಸ್ತೆಯಲ್ಲಿ ಪ್ರತ್ಯಕ್ಷವಾದ ಕಾಡಾನೆ ಕಬ್ಬಿನ ಲಾರಿ ಅಡ್ಡಗಟ್ಟಿದೆ. ಆನೆ ಕಂಡು ಹೌಹಾರಿರುದ ವಾಹನ ಸವಾರರು ರಸ್ತೆಯ ಎರಡೂ ಬದಿಗಳಲ್ಲೂ ವಾಹನ ನಿಲ್ಲಿಸಿ ಆನೆ ಪಕ್ಕಕ್ಕೆ ಸರಿಯುವ ತನಕ ಕಾದಿದ್ದು ಅರ್ಧ ತಾಸಿಗಿಂತಲೂ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಕಬ್ಬಿನ ಲಾರಿಗೆ ಟಾರ್ಪಾಲ್ ಸುತ್ತಿದ್ದರೂ ಬಿಡದ ಕಾಡಾನೆ ಟಾರ್ಪಾಲ್ ಕಿತ್ತು ಬಿಸಾಡಿ ಕಬ್ಬಿನ ಜಲ್ಲೆಗಳಲ್ಲಿ ಸವಿದಿದೆ. 

0
Report
Chamarajanagar571128

ಸಾಗಡೆ ಗ್ರಾಮದ ಜಮೀನಿನಲ್ಲಿ ಚಿರತೆ ಓಡಾಟದ ದೃಶ್ಯ ಸೆರೆ

SurendraSurendraAug 24, 2024 14:32:55
Sagade, Karnataka:
ಜಮೀನುಗಳಲ್ಲಿ ಚಿರತೆ ಓಡಾಡಿ ಜನರನ್ನು ಭಯಬೀತಗೊಳಿಸಿರುವ ಘಟನೆ ಚಾಮರಾಜನಗರ ತಾಲೂಕಿನ‌ ಸಾಗಡೆ ಗ್ರಾಮದಲ್ಲಿ ಶನಿವಾರ ನಡೆದಿದೆ. ಸಾಗಡೆ ಗ್ರಾಮದ ಬಿಳಿಗಿರಿನಾಯಕ ಎಂಬವರ ಜಮೀನಿನಲ್ಲಿ ಚಿರತೆ ಓಡಾಟ ಕಂಡುಬಂದಿದ್ದು ಅರಣ್ಯ ಇಲಾಖೆಯು ಚಿರತೆ ಸೆರೆಗಾಗಿ ಎರಡು ಕಡೆ ಬೋನಿಟ್ಟಿದ್ದಾರೆ. ಚಿರತೆ ಓಡಾಟದ ವೀಡಿಯೋ ಕೂಡ ಸೆರೆಯಾಗಿದ್ದು ಜಮೀನಿಗೆ ಹೋಗಲು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ, ಶೀಘ್ರ ಚಿರತೆ ಸೆರೆ ಹಿಡಿಯಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.
1
Report
Chamarajanagar571126

ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಶ್ರಾವಣ ಸಂಭ್ರಮ; ಭಕ್ತ ಸಾಗರ

SurendraSurendraAug 24, 2024 14:22:49
Berambadi State Forest, Karnataka:
ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ದ ಧಾರ್ಮಿಕ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಮೂರನೇ ಶ್ರಾವಣ ಶನಿವಾರ ಪ್ರಯುಕ್ತ ಭಕ್ತರ ದಂಡು ದೇವಸ್ಥಾನಕ್ಕೆ ಹರಿದು ಬಂದಿತ್ತು. ಶನಿವಾರ ಸಂಜೆ 4 ರ ತನಕವೂ ಕೂಡ ಗುಂಡ್ಲುಪೇಟೆ ತಾಲೂಕಿನ ವಿವಿಧ ಗ್ರಾಮ ಸೇರಿದಂತೆ ಚಾಮರಾಜನಗರ, ಬೆಂಗಳೂರು, ಮೈಸೂರು ಭಾಗದಿಂದ ಸಹಸ್ರಾರು ಭಕ್ತರು ದೇವಸ್ಥಾನಕ್ಕೆ ಆಗಮಿಸಿದ್ದರು. ಕೆಎಸ್‍ಆರ್‍ಟಿಸಿ ವತಿಯಿಂದ ಬೆಟ್ಟಕ್ಕೆ ತೆರಳಲು 20ಕ್ಕೂ ಅಧಿಕ ಬಸ್‍ಗಳನ್ನು ನಿಯೋಜನೆ ಮಾಡಲಾಗಿತ್ತು. ಇದರೊಂದಿಗೆ ಪಟ್ಟಣದಿಂದ ಗೋಪಾಲಸ್ವಾಮಿ ಬೆಟ್ಟದ ತಪ್ಪಲಿನ ತನಕ ಆಟೋ, ಟೆಂಪೋ ಸೇರಿದಂತೆ ಖಾಸಗೀ ವಾಹನಗಳು ಸಂಚರಿಸಿದವು.
1
Report
Chamarajanagar571440

ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಮನೆ ಕಳ್ಳತನ!

SurendraSurendraAug 24, 2024 12:41:21
Kollegala, Karnataka:

ಮಾಜಿ ಶಿಕ್ಷಣ ಸಚಿವ, ಮಾಜಿ ಶಾಸಕ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್ ಅವರ ಮನೆ ಕಳ್ಳತನವಾಗಿದೆ. ಮಾಜಿ ಶಿಕ್ಷಣ ಸಚಿವ ಎನ್.ಮಹೇಶ್ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಆದರ್ಶ ಬಡಾವಣೆಯಲ್ಲಿ ವಾಸವಾಗಿದ್ದು, ನಿನ್ನೆ ಸಂಜೆಯವರೆಗೂ ಮನೆಯಲ್ಲಿದ್ದ ಎನ್.ಮಹೇಶ್ ಬೆಂಗಳೂರಿಗೆ ತೆರಳಿದ್ದಾರೆ. ಇದನ್ನು ತಿಳಿದ ಅಪಾಯಕಾರಿ ಕಳ್ಳರು ರಾತ್ರಿ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದಾರೆ. ಮಹೇಶ್ ಮನೆಯಲ್ಲಿ ನೆರೆಹೊರೆಯವರು ಕಳ್ಳತನ ಮಾಡಿರುವುದು ಗೊತ್ತಾಯಿತು. ಕಳ್ಳತನವಾದ ಮಾಲು ಇನ್ನೂ ಪತ್ತೆಯಾಗಿಲ್ಲ. ಕೊಳ್ಳೇಗಾಲ ಪೊಲೀಸರು ಭೇಟಿ ನೀಡಿದ್ದಾರೆ.

1
Report
Chamarajanagar571313

ಸಿದ್ದರಾಮಯ್ಯ ಗೌರವಕ್ಕೆ ಕೋಮುವಾದಿಗಳಿಂದ ಧಕ್ಕೆ ಪಿತೂರಿ: ಸಚಿವ ಡಾ.ಎಚ್.ಸಿ.ಮಹಾದೇವಪ್ಪ

SurendraSurendraAug 24, 2024 11:41:46
Chamarajanagar, Karnataka:
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಯಾವ ತಪ್ಪು ಮಾಡಿಲ್ಲ ಎಂದು ಡಾ.ಎಚ್.ಸಿ.ಮಹಾದೇವಪ್ಪ ಹೇಳಿದರು. ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಶಾಸಕರು, ಮಂತ್ರಿಗಳು ಹಾಗೂ ಹೈಕಮಾಂಡ್ ಸಿದ್ದರಾಮಯ್ಯ ಪರ ಇದ್ದಾರೆ, ಸಿದ್ದರಾಮಯ್ಯ ಯಾವ ತಪ್ಪು ಕೂಡ ಮಾಡಿಲ್ಲ ಎಂದು ತಿಳಿಸಿದರು. ಜೆಡಿಎಸ್, ಬಿಜೆಪಿ ರಾಜಭವನವನ್ನು ರಾಜಕೀಯ ಅಂಗಳ ಮಾಡಿಕೊಂಡಿದ್ದಾರೆ, ಸಂವಿಧಾನ ಉಲ್ಲಂಘನೆ ‌ಮಾಡುತ್ತಿರುವುದು ಪ್ರಜಾಪ್ರಭುತ್ವಕ್ಕೆ ಅಪಾಯ. ಪ್ರಾಮಾಣಿಕ ರಾಜಕಾರಣಿ ಸಿದ್ದರಾಮಯ್ಯ ಮೇಲೆ ಕಳಂಕ, ಗೌರವಕ್ಕೆ ಧಕ್ಕೆ ತರಲು ಕೋಮು ವಾದಿಗಳು, ಮತೀಯವಾದಿಗಳಿಂದ ಪಿತೂರಿ ನಡೆಸಲಾಗಿದೆ ಎಂದು ಆರೋಪಿಸಿದರು.
1
Report
ChamarajanagarChamarajanagar

ಅನಿರೀಕ್ಷಿತ ಅತಿಥಿಗಳು: ಕಬ್ಬು ಕಟಾವು ವೇಳೆ 2 ಚಿರತೆ ಮರಿ ಪತ್ತೆ

SurendraSurendraAug 24, 2024 02:15:18
Hangalapura, Karnataka:
ಗುಂಡ್ಲುಪೇಟೆ ತಾಲೂಕಿನ ಹಂಗಳಪುರದ ಜಮೀನಿನಲ್ಲಿ ಕಬ್ಬು ಕಟಾವು ಮಾಡುವ ವೇಳೆ ಎರಡು ಚಿರತೆ ಮರಿಗಳು ಸಿಕ್ಕಿರುವ ಘಟನೆ ನಡೆದಿದೆ. ರೈತ ಮಹೇಶ್ ಎಂಬುವರ ಜಮೀನಿನಲ್ಲಿ ಚಿರತೆ ಮರಿಗಳು ಸಿಕ್ಕಿವೆ. ಮರಿಗಳಲ್ಲಿ ಒಂದು ಹೆಣ್ಣು ಮತ್ತೊಂದು ಗಂಡಾಗಿದೆ. ಕಬ್ಬು ಕಟಾವು ಮಾಡುವ ವೇಳೆ ಚೀರಾಟದ ಶಬ್ದ ಕೇಳಿ ಪರಿಶೀಲಿಸಿದಾಗ ಅಂದಾಜು 2 ತಿಂಗಳ 2 ಚಿರತೆ ಮರಿಗಳು ಪತ್ತೆಯಾಗಿದೆ. ಗುಂಡ್ಲುಪೇಟೆ ವಲಯ ಅರಣ್ಯಾಧಿಕಾರಿಗಳಿಗೆ ಚಿರತೆ ಮರಿಗಳನ್ನು ಒಪ್ಪಿಸಲಾಗಿದ್ದು ತಾಯಿ ಚಿರತೆ ಜೊತೆ ಮರಿಗಳನ್ನು ಸೇರಿಸಲು ಅಧಿಕಾರಿಗಳು ಬೋನಿಟ್ಟು ಕ್ರಮ ಕೈಗೊಂಡಿದ್ದಾರೆ.
1
Report
Chamarajanagar571111

ರೈತರು ಟೊಮೆಟೊ ಖರೀದಿದಾರರಿಲ್ಲದೆ ರಸ್ತೆಬದಿ ಎಸೆದಿದ್ದಾರೆ

SurendraSurendraAug 23, 2024 11:58:44
Panjanahalli, Karnataka:

ಮಳೆ ರೋಗಕ್ಕೆ ತುತ್ತಾಗಿ ಟೊಮೇಟೊ ಗುಣಮಟ್ಟ ಕಡಿಮೆ ಇರುವ ಹಿನ್ನೆಲೆಯಲ್ಲಿ ಖರೀದಿದಾರರಿಲ್ಲದೆ ರೈತರು ಮಾರುಕಟ್ಟೆ ಆವರಣ ಹಾಗೂ ಹೆದ್ದಾರಿಗಳಲ್ಲಿ ಟೊಮೇಟೊ ಸುರಿಯುತ್ತಿದ್ದಾರೆ. ಗುಂಡ್ಲುಪೇಟೆ ಎಪಿಎಂಸಿ ಮಾರುಕಟ್ಟೆ ಕೇರಳದ ವ್ಯಾಪಾರಿಗಳ ಮೇಲೆ ಅವಲಂಬಿತವಾಗಿದೆ, ವಯನಾಡ್ ದುರಂತದ ನಂತರ ಕೇರಳದಿಂದ ಖರೀದಿಸುವವರ ಸಂಖ್ಯೆ ಕಡಿಮೆಯಾಗಿದೆ. ಮೇಲಾಗಿ ಕಳೆದ ಕೆಲ ದಿನಗಳಿಂದ ತಾಲ್ಲೂಕಿನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ಹೂಜಿ ರೋಗ ಕಾಣಿಸಿಕೊಂಡು ಗುಣಮಟ್ಟ ಹದಗೆಟ್ಟಿದೆ.

1
Report
Chamarajanagar571111

ಜೀತದಾಳುಗಳಿಗೆ ಬಿಡುಗಡೆ ಪತ್ರ ಕೊಡಿ ಎಂದು ಪ್ರತಿಭಟನೆ

SurendraSurendraAug 23, 2024 11:54:46
Gundlupete, Karnataka:
ಜೀತದಾಳುಗಳಿಗೆ ಬಿಡುಗಡೆ ಪತ್ರ ನೀಡಲು ತಾಲೂಕು ಅಧಿಕಾರಿಗಳು ವಿಳಂಭ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿ ಜೀತ ವಿಮುಕ್ತಿ ಕರ್ನಾಟಕ ಸಂಸ್ಥೆ ವತಿಯಿಂದ ಗುಂಡ್ಲುಪೇಟೆ ತಾಲೂಕು ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು. ಜೀತ ವಿಮುಕ್ತಿ ಕರ್ನಾಟಕ ಸಂಸ್ಥೆ ಜಿಲ್ಲಾ ಸಂಚಾಲಕ ಕುನ್ನಹಳಿಯಯ್ಯ ನೇತೃತ್ವದಲ್ಲಿ ಸಂಘಟನೆ ಕಾರ್ಯಕರ್ತರು ತಹಸೀಲ್ದಾರ್ ಕಚೇರಿ ಎದುರು ಧಿಕ್ಕಾರದ ಘೋಷಣೆಗಳನ್ನ ಕೂಗಿ ಆಕ್ರೋಶ ಹೊರಹಾಕಿದರು. ಗುಂಡ್ಲುಪೇಟೆ ತಾಲೂಕಿನಲ್ಲಿ ಜೀತಪದ್ಧತಿ ಇನ್ನೂ ಜೀವಂತವಾಗಿದ್ದು ಅಧಿಕಾರಿಗಳ ನಿರ್ಲಕ್ಷ್ಯದಿಂದ ಜೀತಪದ್ಧತಿಯನ್ನ ಮುಚ್ಚಿಹಾಕಲಾಗುತ್ತಿದೆ ಎಂದು ಕಿಡಿಕಾರಿದರು.
1
Report
Chamarajanagar571313

ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ವಿಜೃಂಭಣೆ ಆರಾಧನೆ, ರಾಯರ ಮೆರವಣಿಗೆ

SurendraSurendraAug 23, 2024 11:03:02
Chamarajanagar, Karnataka:
ಮಂತ್ರಾಲಯ ಗುರು ಶ್ರೀ ರಾಘವೇಂದ್ರ ಸ್ವಾಮಿಗಳ 353ನೇ ಆರಾಧಾನಾ ಮಹೋತ್ಸವದ ಉತ್ತರ ಆರಾಧನೆ ಗುರುವಾರ ಸಂಜೆ ನಗರದ ರಾಘವೇಂದ್ರ ಸ್ವಾಮಿ ಮೃತ್ತಿಕಾ ವೃಂದಾವನದಲ್ಲಿ ವಿಜೃಂಭಣೆಯಿಂದ ನಡೆಯಿತು. ಸಹಸ್ರಾರು ಮಂದಿ ಭಕ್ತರು ರಾಯರ ಮಠಕ್ಕೆ ಆಗಮಿಸಿ ದರ್ಶನ ಪಡೆದರು. ಗುರುವಾರ ಸಂಜೆ ಶ್ರೀ ರಾಯರ ಮೆರವಣಿಗೆಯನ್ನು ರಾಜಬೀದಿಗಳಲ್ಲಿ ನಡೆಸಲಾಯಿತು. ಈ ಕುರಿತು ಮಠದ ಅರ್ಚಕ ಪವನ್ ಮಾತನಾಡಿ, ನಿತ್ಯವೂ ಕೂಡ ರಾಘವೇಂದ್ರಸ್ವಾಮಿಗೆ ಸುಪ್ರಭಾತ, ನಿರ್ಮಾಲ್ಯ ಸೇವೆ, ಪಂಚಾಮೃತ ಅಭಿಷೇಕ, ಶ್ರೀಗುರುರಾಜರಿಗೆ ಪಾದಪೂಜೆ ತುಳಸಿ ಅರ್ಚನೆ, ಕನಕಾಭಿಷೇಕ ಸಲ್ಲಿಸಿ ವಿಶೇಷ ಫಲ-ಪುಷ್ಪ ಅಲಂಕಾರ ಮಾಡಲಾಗಿದೆ ಎಂದು ತಿಳಿಸಿದರು.
1
Report
Chamarajanagar571313

ಐವನ್ ಡಿಸೋಜಾ ಫೋಟೋ ತುಳಿದು, ಪೊಲೀಸರ ವಿರುದ್ಧ ಆಕ್ರೋಶ

SurendraSurendraAug 23, 2024 10:58:35
Chamarajanagar, Karnataka:

ರಾಜ್ಯಪಾಲರ ಭವನದ ಮೇಲೆ ಬಾಂಗ್ಲಾದೇಶದ ರೀತಿಯ ದಾಳಿಯನ್ನು ಘೋಷಿಸಿದ ಡಿಸೋಜಾ ಅವರ ಚಿತ್ರವನ್ನು ಬಿಜೆಪಿ ಕಾರ್ಯಕರ್ತರು ಪುಡಿಮಾಡಿದರು ಮತ್ತು ಧಿಕ್ಕಾರದ ಘೋಷಣೆಗಳನ್ನು ಎತ್ತಿದರು. ಐವನ್ ಡಿಸೋಜಾ ಫೋಟೋ ತುಳಿದು ಪ್ರತಿಭಟನೆ ನಡೆಸುತ್ತಿದ್ದುದನ್ನು ಕಂಡ ಪೊಲೀಸರು ಫೋಟೋ ತೆಗೆಯಲು ಮುಂದಾದರು. ಈ ವೇಳೆ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದ ಪ್ರತಿಭಟನಾಕಾರರು, ಕಾಂಗ್ರೆಸ್ ಪ್ರತಿಭಟನೆ ವೇಳೆ ರಾಜ್ಯಪಾಲರ ಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು ಏನು ಮಾಡುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

1
Report
Chamarajanagar571313

ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪ್ರತಿಭಟನೆ ರಾಜೀನಾಮೆಗೆ ಒತ್ತಾಯ

SurendraSurendraAug 23, 2024 10:56:06
Chamarajanagar, Karnataka:
ಚಾಮರಾಜನಗರ: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು. ಚಾಮರಾಜನಗರದ ಚಾಮರಾಜೇಶ್ವರ ದೇಗುಲ ಮುಂಭಾಗ ಬಿಜೆಪಿ ಮುಖಂಡರು, ಕಾರ್ಯಕರ್ತರು ಧರಣಿ ನಡೆಸಿ ಕಾಂಗ್ರೆಸ್ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಧರಣಿ ಬಳಿಕ ಭುವನೇಶ್ವರಿ ವೃತ್ತದ ತನಕ ಪ್ರತಿಭಟನಾ ಮೆರವಣಿಗೆ ನಡೆಸಿ ಐವಾನ್ ಡಿಸೋಜಾ ಫೋಟೋ‌ ತುಳಿದು ಆಕ್ರೋಶ ಹೊರಹಾಕಿದರು.
1
Report
Chamarajanagar571490

ಮಾದಪ್ಪನ ಬೆಟ್ಟದಲ್ಲಿ ಬಸ್‌ಗಳಿಗೆ ಹುಟ್ಟುಹಬ್ಬದ ಸಂಭ್ರಮ

SurendraSurendraAug 19, 2024 15:42:30
Male Mahadeshwara Hills, Karnataka:

ತಾಲೂಕಿನ ಹೆಣ್ಣೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಸ್‌ಗಳಿಗೆ ಹುಟ್ಟುಹಬ್ಬದ ಸಂಭ್ರಮದ ವಿಶೇಷ ಕಾರ್ಯಕ್ರಮ ನಡೆಯಿತು. ಹೆಣ್ಣೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಕ್ಷೇತ್ರ ಪ್ರಾಧಿಕಾರದಿಂದ ಕಾರ್ಯನಿರ್ವಹಿಸುತ್ತಿರುವ 4 ಬಸ್‌ಗಳ ಮೊದಲ ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಕಳೆದ ವರ್ಷ ಮಲೆ ಮಹದೇಶ್ವರ ಬೆಟ್ಟ ಪ್ರದೇಶಾಭಿವೃದ್ಧಿ ಪ್ರಾಧಿಕಾರದಿಂದ ನಾಲ್ಕು ಹೊಸ ಬಸ್‌ಗಳನ್ನು ಪರಿಚಯಿಸಲಾಗಿತ್ತು. 1 ವರ್ಷ ಸೇವೆ ಪೂರೈಸಿದ ಹಿನ್ನೆಲೆಯಲ್ಲಿ 4 ಬಸ್‌ಗಳು ಬಸ್‌ಗಳ ಮುಂದೆ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡವು. ಹುಟ್ಟುಹಬ್ಬದ ವಿಡಿಯೋ ವೈರಲ್ ಆಗಿದೆ.

0
Report
Chamarajanagar571313

ಕಾಂಗ್ರೆಸ್ ಸರ್ಕಾರ ಬಂದಿದ್ದು ಬಿಜೆಪಿಗರಿಗೆ ಹೊಟ್ಟೆಯುರಿ; ಸಚಿವ ಕೆ.ವೆಂಕಟೇಶ್

SurendraSurendraAug 19, 2024 15:40:22
Chamarajanagar, Karnataka:
ಬಹುಮತದಿಂದ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಬಂದಿರುವುದನ್ನು ಕಂಡರೆ ಬಿಜೆಪಿಗೆ ಹೊಟ್ಟೆಯುರಿ ಎಂದು ಸಚಿವ ಕೆ.ವೆಂಕಟೇಶ್ ಹೇಳಿದರು. ನಗರದದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬಿಜೆಪಿಗರಿಗೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದ್ದೆ ಹೊಟ್ಟೆ ಉರಿ ಆಗಿದೆ, ಬಿಜೆಪಿಯವರು ತಾವು ಸರ್ಕಾರ ರಚನೆ ಮಾಡ್ತೀವಿ ಅಂತ ಕನಸು ಕಾಣುತ್ತಿದ್ದರು.ಕುಮಾರಸ್ವಾಮಿ ಗೆ ಚುನಾವಣೆಯಲ್ಲಿ ಫಲಿತಾಂಶ ಅತಂತ್ರ ಸ್ಥಿತಿಯಲ್ಲಿ ಬರುತ್ತೆ, ನಾನು ಸರ್ಕಾರ ರಚನೆ ಮಾಡುತ್ತೇನೆ ಅಂತ ಭ್ರಮೆಯಲ್ಲಿದ್ದರು. ಆದ್ರೆ ಆ ರೀತಿ ಆಗ್ಲಿಲ್ಲ, ಜನ ಕಾಂಗ್ರೆಸ್ ಗೆ ಬಹುಮತ ನೀಡಿದ್ರು. ಅದನ್ನ ಅವರಿಗೆ ಸಹಿಸಿಕೊಳ್ಳಲು ಆಗ್ತಿಲ್ಲ ಎಂದು ಕಿಡಿಕಾರಿದರು.
1
Report
Chamarajanagar571313

ಎಚ್‌.ಡಿ.ಕೆ ಅಕ್ರಮ ಆಸ್ತಿ ದಾಖಲೆ ನನ್ನ ಹತ್ರ ಇದೆ: ಮಾಜಿ ಸಂಸದ ಕಾಗಲವಾಡಿ ಶಿವಣ್ಣ

SurendraSurendraAug 19, 2024 15:37:51
Chamarajanagar, Karnataka:
ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೊಡುತ್ತಿದ್ದಂತೆ ಸಿಡಿದೆದ್ದಿರುವ ಕಾಂಗ್ರೆಸ್ ಪಡೆ ಇಂದು ಚಾಮರಾಜನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ, ಮಾಜಿ ಸಂಸದ ಕಾಗಲವಾಡಿ ಶಿವಣ್ಣ ಮಾತನಾಡಿ ಕೇಂದ್ರ ಸಚಿವ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಅಕ್ರಮ ಆಸ್ತಿ ಬಾಂಬ್ ಸಿಡಿಸಿದರು. ಡಿನೋಟಿಫೈ ವಿಚಾರವಾಗಿ ಮಾಜಿ ಸಂಸದ ಕಾಗಲವಾಡಿ ಶಿವಣ್ಣ ಮಾತನಾಡಿ, ನೂರಾರು ಎಕರೆ ತೋಟಗಳನ್ನು ಡಿನೋಟಿಫೈ ಮಾಡಿ , ಕೋಟಿ ಕೋಟಿ ಹಣ ಮಾಡುತ್ತಿದ್ದರು. ಏನು ಸರ್ ಇವೆಲ್ಲಾ ಅಂತ ಕೇಳಿದ್ದಕ್ಕೆ ಏನು ಮಾಡೋದು ಪಕ್ಷಕ್ಕೆ ಹಣ ಬೇಕಲ್ಲ ಅಂತ ಹೇಳಿದ್ರು, ಹಗರಣದ ದಾಖಲೆ ನನ್ನ ಬಳಿ ಇದೆ ಎಂದರು.
0
Report
Chamarajanagar571313

ವೈದ್ಯರಿಗೆ ಸುರಕ್ಷತೆ ಇಲ್ಲದಂತಾಗಿದೆ; ವೈದ್ಯರ ಸಂಘದ ಪ್ರ.ಕಾರ್ಯದರ್ಶಿ ಡಾ. ನಂದಕಿಶೋರ್

SurendraSurendraAug 17, 2024 12:45:03
Chamarajanagar, Karnataka:

ಚಾಮರಾಜನಗರ ವೈದ್ಯರ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ನಂದಕಿಶೋರ್ ಮಾತನಾಡಿ, ವೈದ್ಯರಿಗೆ ಭದ್ರತೆ, ಗೌರವ ಸಿಗುತ್ತಿಲ್ಲ, ಅತ್ಯಾಚಾರ ಪ್ರಕರಣಗಳಲ್ಲಿ ಸಾಕ್ಷ್ಯ ನಾಶವಾಗುತ್ತಿದೆ. ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜನರ ಜೀವ ಉಳಿಸುವ ಕೆಲಸ ಮಾಡುವ ವೈದ್ಯರು ಮನುಷ್ಯರ ಪ್ರಾಣ ತೆಗೆಯುತ್ತಿದ್ದಾರೆ, ಅಂತಹ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ, ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ .

0
Report
Chamarajanagar571111

ಸಿಎಂ ವಿರುದ್ಧ ಪ್ರಾಸಿಕ್ಯೂಷನ್: ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ

SurendraSurendraAug 17, 2024 10:35:42
Gundlupete, Karnataka:

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಯನ್ನು ಖಂಡಿಸಿ ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಮಾನವ ಸರಪಳಿ ನಿರ್ಮಿಸಿ, ರಾಜ್ಯಪಾಲ ಮತ್ತು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಸರ್ಕಾರದ ಪಿತೂರಿಯನ್ನು ಖಂಡಿಸಿದರು.

0
Report
Chamarajanagar571313

ಹರ್ ಘರ್ ತಿರಂಗ ಅಭಿಯಾನದ ಪ್ರಯುಕ್ತ ನಗರದಲ್ಲಿ ಆಕರ್ಷಕ ಬೈಕ್ ಜಾಥಾ

SurendraSurendraAug 15, 2024 17:57:47
Chamarajanagar, Karnataka:
ಹರ್ ಘರ್ ತಿರಂಗ ಅಭಿಯಾನದ ಪ್ರಯುಕ್ತ ಚಾಮರಾಜನಗರದಲ್ಲಿಂದು ಆಕರ್ಷಕ ಬೈಕ್ ಜಾಥಾ ನಡೆಯಿತು. ಶ್ರೀ ಚಾಮರಾಜೇಶ್ವರ ದೇವಾಲಯದ ಅವರಣದಿಂದ ಜಿಲ್ಲಾಡಳಿತ ಭವನದವರೆಗೆ ಏರ್ಪಡಿಸಲಾಗಿದ್ದ ಬೈಕ್ ರ್ಯಾಲಿಗೆ ನಗರಸಭೆ ಪೌರಾಯುಕ್ತರ ಎಸ್.ವಿ. ರಾಮದಾಸ್ ಹಸಿರು ನಿಶಾನೆ ತೋರಿದರು. ನಗರದ ಚಾಮರಾಜೇಶ್ವರ ದೇವಾಲಯದಿಂದ ಜೋಡಿರಸ್ತೆಯಲ್ಲಿ ಸಾಗಿದ ಬೈಕ್ ರ್ಯಾಲಿಯಲ್ಲಿ ಕೇಸರಿ, ಬಿಳಿ, ಹಸಿರು ಬಣ್ಣದ ತ್ರಿವರ್ಣ ಧ್ವಜಗಳು ನೋಡುಗರ ಮನಸೆಳೆದವು. ರ್ಯಾಲಿಯು ಜಿಲ್ಲಾಡಳಿತ ಭವನದ ತಲುಪಿದ ಸಂದರ್ಭದಲ್ಲಿ ಪೌರಾಯುಕ್ತರಾದ ಎಸ್.ವಿ. ರಾಮದಾಸ್ ಅವರು ಸ್ವಾತಂತ್ರೋತ್ಸವದ ಪ್ರತಿಜ್ಞಾವಿಧಿ ಬೋಧಿಸಿದರು.
0
Report
Chamarajanagar571444

ಕಾಡುಗಳ್ಳನ ಮೀಣ್ಯಂ ದಾಳಿಗೆ 32 ವರ್ಷ: ಹುತಾತ್ಮ ಪೊಲೀಸರಿಗೆ ಗೌರವ ನಮನ

SurendraSurendraAug 15, 2024 17:57:33
Minya, Karnataka:
ಕಾಡುಗಳ್ಳ ವೀರಪ್ಪನ್ ನಡೆಸಿದ ಪೈಶಾಚಿಕ ಕೃತ್ಯಕ್ಕೆ ಇಂದು 32 ವರ್ಷಗಳಾಗಿದ್ದರೂ ಸ್ವಾತಂತ್ರ್ಯ ದಿನದ ಮುನ್ನ ಬರುವ ಶೋಕಗೀತೆ ಇಂದಿಗೂ ಆ ಭಾಗದಲ್ಲಿ ಹಸಿರಾಗಿದೆ. ಹನೂರು ತಾಲೂಕಿನ ಮಿಣ್ಯಂ ಸಮೀಪ ಪೊಲೀಸ್ ಅಧಿಕಾರಿಗಳು ಮತ್ತು ವೀರಪ್ಪನ್ ತಂಡದ ಜೊತೆಗೆ ನಡೆದ ಗುಂಡಿನ ಚಕಮಕಿಯಲ್ಲಿ 6 ಮಂದಿ ಪೊಲೀಸರು ಹುತಾತ್ಮರಾಗಿದ್ದರು. ಎಸ್​ಪಿ ಹರಿಕೃಷ್ಣ ಹಾಗೂ ಎಸ್ಐ ಶಕೀಲ್ ಅಹ್ಮದ್ ಸೇರಿದಂತೆ 6 ಮಂದಿ ಪೊಲೀಸರು ವೀರಪ್ಪನ್​ ಮೋಸಕ್ಕೆ ಬಲಿಯಾಗಿದ್ದರು. ಮೀಣ್ಯಂ ಸಮೀಪ ನಡೆದ ದಾಳಿ ಸ್ಥಳದಲ್ಲಿ ಸ್ಮಾರಕ ನಿರ್ಮಿಸಲಾಗಿದ್ದು ಪ್ರತಿ ಆ.14 ರಂದು ಹುತಾತ್ಮ ಪೊಲೀಸರಿಗೆ ಪೊಲೀಸರು ಗೌರವ ವಂದನೆ ಸಲ್ಲಿಸುತ್ತಾರೆ.
0
Report
Chamarajanagar571109

ಮುಂಗಾರು ಅಬ್ಬರಕ್ಕೆ ಕಮರಹಳ್ಳಿ ಕೆರೆ ಭರ್ತಿ: ಬಾಗಿನ ಅರ್ಪಿಸಿದ ಶಾಸಕ

SurendraSurendraAug 15, 2024 17:57:17
Begur, Karnataka:
ಗುಂಡ್ಲುಪೇಟೆ ತಾಲೂಕಿನ ಬೇಗೂರು ಸಮೀಪದ ಕಮರಹಳ್ಳಿ ಕೆರೆ ಭರ್ತಿಯಾಗಿ ಕೋಡಿಬಿದ್ದ ಹಿನ್ನೆಲೆ ಶಾಸಕ ಗಣೇಶ್ ಪ್ರಸಾದ್ ಬುಧವಾರ ಮಧ್ಯಾಹ್ನ ಬಾಗಿನ ಅರ್ಪಿಸಿದರು. ಕಮರಹಳ್ಳಿ ಕೆರೆಯು ಸುಮಾರು 400 ಎಕರೆ ವಿಸ್ತೀರ್ಣವಿದ್ದು ಕೆರೆ ತುಂಬುವ ಯೋಜನೆ ಮೂಲಕ ನೀರನ್ನು ತುಂಬ ಬದಲಾಗುತ್ತಿತ್ತು. ಆದರೆ, ಈ ಬಾರಿ ಮುಂಗಾರು ಮಳೆ ಉತ್ತಮವಾಗಿ ಸುರಿದ ಪರಿಣಾಮ ಕೆರೆ ಭರ್ತಿಯಾಗಿ ಕೋಡಿ ಬಿದ್ದಿದೆ. ಗಂಗೆಗೆ ಶಾಸಕ ಗಣೇಶ್ ಪ್ರಸಾದ್ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿ ಉತ್ತಮ ಮಳೆ- ಬೆಳೆ ಮುಂದುವರೆಯಲಿ ಎಂದು ಪ್ರಾರ್ಥಿಸಿದರು.
0
Report
Chamarajanagar571313

ಟ್ರಾಕ್ಟರ್ ರ್ಯಾಲಿ ಮಾಡಲು ಮುಂದಾದ ರೈತರು ಪೊಲೀಸ್ ವಶಕ್ಕೆ

SurendraSurendraAug 15, 2024 09:49:34
Chamarajanagar, Karnataka:
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಟ್ರಾಕ್ಟರ್ ರ್ಯಾಲಿ ಮಾಡಲು ಮುಂದಾದ ರೈತರನ್ನು ಚಾಮರಾಜನಗರ ಪೊಲೀಸರು ಗುರುವಾರ ಮಧ್ಯಾಹ್ನ ವಶಕ್ಕೆ ಪಡೆದು ಕರೆದೊಯ್ದರು. ವಿವಿಧ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಕಬ್ಬು ಬೆಳೆಗಾರರ ಸಂಘದ ಮಹಾದೇವಸ್ವಾಮಿ ನೇತೃತ್ವದಲ್ಲಿ ಇಂದು ಟ್ರಾಕ್ಟರ್ ರ್ಯಾಲಿ ನಡೆಸಲು ಸಿದ್ಧತೆ ನಡೆಸಲಾಗಿತ್ತು. ಚಾಮರಾಜನಗರ ಪ್ರವಾಸಿ ಮಂದಿರದಿಂದ ರ್ಯಾಲಿ ಆರಂಭವಾಗುತ್ತಿದ್ದಂತೆ ಅನುಮತಿ ನಿರಾಕರಣೆ ಕಾರಣದಿಂದ 25 ಕ್ಕೂ ಹೆಚ್ಚು ರೈತರನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು ಸಂಯುಕ್ತ ಕಿಸಾನ್ ಮೋರ್ಚಾ ಕರೆ ಮೇರೆಗೆ ಈ ಜಾಥಾ ಆಯೋಜನೆಯಾಗಿತ್ತು.
0
Report