Back
Bagalkot587103blurImage

Bagalkot - ಮಕ್ಕಳ ಮೇಲಿನ ಪ್ರಕರಣಗಳಲ್ಲಿ ಕಠಿಣ ನಿಯಮ ಪಾಲನೆ: ಶೇಖರಗೌಡ ರಾಮತ್ನಾಳ ಸೂಚನೆ

Somashekhar
May 16, 2025 13:46:03
Bagalkote, Karnataka
ಪೊಲೀಸ್ ಠಾಣೆಗಳಲ್ಲಿ ದಾಖಲಾಗುವ ಮಕ್ಕಳ ಮೇಲಿನ ಪ್ರಕರಣಗಳ ನಿರ್ವಹಣೆ ಸಮಯದಲ್ಲಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ರಾಮತ್ನಾಳ ಪೊಲೀಸ್ ಠಾಣೆಯ ಠಾಣಾಧಿಕಾರಿಗಳಿಗೆ ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ನಡೆದ ಮಕ್ಕಳ ವಿಶೇಷ ಪೊಲೀಸ್ ಘಟಕ ಮಕ್ಕಳ ಕಲ್ಯಾಣಾಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಮಕ್ಕಳ ಪ್ರಕರಣಕ್ಕೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಅಧಿಕಾರಿಗಳು ಮಕ್ಕಳ ಸಾಮಾಜಿಕ ಹಿನ್ನಲೆ ಮತ್ತು ಅಪರಾಧದಲ್ಲಿ ಮಗು ಒಳಗೊಳ್ಳುವ ಪ್ರತಿಯೊಂದು ಪ್ರಕರಣಗಳಲ್ಲಿ ಬಂಧಿಸುವ ಸಂದರ್ಭದಲ್ಲಿ ಸಾಮಾಜಿಕ ಹಿನ್ನಲೆ ವರದಿಯನ್ನು ಮಂಡಳಿಗೆ ಕಡ್ಡಾಯವಾಗಿ ಸಲ್ಲಿಸಲು ತಿಳಿಸಿದರು. ಎಸ್.ಜೆ.ಪಿ.ಯು ಕಲ್ಯಾಣ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳ ಬಾಲನ್ಯಾಯ ಕಾಯ್ದೆ-2015ರ ಕುರಿತು ತರಬೇತಿ ಪಡೆದ ಬಗ್ಗೆ ಮಾಹಿತಿ ಪಡೆದರು.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com