Back
Bagalkot587103blurImage

Bagalkote: ಜಮಖಂಡಿಯಲ್ಲಿ ತಾಳಿ ಕಟ್ಟಿದ ಬಳಿಕ ಆರತಕ್ಷತೆಗೂ ಮೊದಲೇ ಹೃದಯಾಘಾತದಿಂದ ವರ ಸಾವು

Somashekhar
May 17, 2025 10:56:07
Bagalkote, Karnataka
ಒಂದೆಡೆ ಮನೆ ಮಗನ ಮದುವೆಗಾಗಿ ಮಂಟಪ ಹಾಕಿ ಶೃಂಗಾರಗೊಂಡಿದ್ದ ಮನೆ, ಮತ್ತೊಂದೆಡೆ ಮದುವೆ ಮಂಟಪದಲ್ಲೇ ತಾಳಿ ಕಟ್ಟುತ್ತಲೇ ಹೃದಯಾಘಾತದಿಂದ ಸಾವನ್ನಪ್ಪಿದ ವರ, ಇವುಗಳ ಮಧ್ಯೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ. ಅಂದಹಾಗೆ ಇಂತಹವೊಂದು ದೃಶ್ಯ ಕಂಡು ಬಂದಿದ್ದು ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ. ಹೌದು, ತಾಳಿ ಕಟ್ಟಿ ಹೊಸ ಬದುಕಿನ ಸಂಭ್ರಮದಲ್ಲಿದ್ದ ವರ ಕೆಲವೇ ನಿಮಿಷಗಳಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಜಮಖಂಡಿ ತಾಲೂಕಿನ ಕುಂಬಾರಹಳ್ಳ ಗ್ರಾಮದ ಪ್ರವೀಣ್ (೨೪) ಹೃದಯಾಘಾತದಿಂದ ಮೃತಪಟ್ಟ ನತದೃಷ್ಟ. ವೃತ್ತಿಯಲ್ಲಿ ಕೃಷಿಕನಾಗಿರುವ ಪ್ರವೀಣ್ ಹಾಗೂ ಪೂಜಾ ಅವರ ವಿವಾಹ ಜಮಖಂಡಿಯ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿತ್ತು. ಇತ್ತ ಬೆಳಗ್ಗೆಯಿಂದ ಪೂಜೆ ವಿಧಾನಗಳಲ್ಲಿ ಪ್ರವೀಣ್ ಉತ್ಸಾಹದಿಂದ ಭಾಗವಹಿಸಿದ್ದರು. ಮಧ್ಯಾಹ್ನ ೧೨.೧೫ಕ್ಕೆ ಅಕ್ಷತಾರೋಪಣಕ್ಕಾಗಿ ವೇದಿಕೆ ಏರಿದರು.ಆಗ ಏಕಾಏಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com