Back
Bagalkot587102blurImage

Bagalkote - ನೌಕರಿಗೆ ಸೇರಿಸಿಕೊಳ್ಳಿ ಇಲ್ಲವೇ ದಯಾಮರಣ ನೀಡಿ,ಬಾಗಲಕೋಟೆ ನಗರದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ

Somashekhar
May 20, 2025 10:42:44
Bagalkote, Karnataka
ನನ್ನನ್ನು ನೌಕರಿಗೆ ನೇಮಿಸಿಕೊಳ್ಳಿ ಇಲ್ಲವೇ ದಯಾಮರಣಕ್ಕೆ ಅವಕಾಶ ನೀಡಿ,ಎಂದು ಬಾಗಲಕೋಟೆ ಜಿಲ್ಲಾ ಅಯುಷ್ ಆಸ್ಪತ್ರೆ ಹೊರಗುತ್ತಿಗೆ ಸಿಬ್ಬಂದಿ ವಿಜಯಲಕ್ಷ್ಮೀ ಸರೂರ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿರುವ ಅವರು,ಹುನಗುಂದ ತಾಲೂಕಾ ಆಸ್ಪತ್ರೆಯಲ್ಲಿ ಸ್ತ್ರೀರೋಗ ವಿಭಾಗದ ಅಟೆಂಡರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ವೇಳೆ ಕಳೆದ 2023 ರ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದ ಕಾರಣ, ಜಿಲ್ಲಾಧಿಕಾರಿಗಳ ಅದೇಶದ ಮೇರೆಗೆ ಕೆಲಸದಿಂದ ನನ್ನನ್ನು ವಜಾಗೊಳಿಸಲಾಗಿದೆ.ಈ ಬಗ್ಗೆ ನ್ಯಾಯಾಲಯದ ಮೊರೆ ಹೋಗಿದ್ದೆ.ನ್ಯಾಯಾಲಯವು 2025 ರ ಜನವೇರಿ 16.ರಂದು ಮರಳಿ ಕೆಲಸಕ್ಕೆ ಸೇರ್ಪಡೆಗೊಳಿಸುವಂತೆ ಆದೇಶ ನೀಡಿದೆ ಎಂದರು. ನ್ಯಾಯಾಲಯದ ಆದೇಶ ಬಂದು ಈಗಾಗಲೇ ನಾಲ್ಕು ತಿಂಗಳು ಕಳೆದರೂ ,ಸಂಬಂಧಿತ ಅಧಿಕಾರಿಗಳು ಕೆಲಸಕ್ಕೆ ನೇಮಿಸಿಕೊಳ್ಳಲು ಮೀನಮೇಷ ಎನಿಸುತ್ತಿದ್ದಾರೆ.ಇದು ನ್ಯಾಯಾಂಗ ನಿಂದನೆ ವ್ಯಾಪ್ತಿಗೆ ಬರುತ್ತದೆ.ಒಂದು ವಾರದೊಳಗೆ ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳದಿದ್ದರೆ ಜಿಲ್ಲಾ ಆಯುಷ್ ಕಚೇರಿ ಎದುರು ಪ್ರತಿಭಟನೆ
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com