Back
ರಾಜ್ಯದಲ್ಲೂ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ:ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ ವಿಶ್ವಾಸ
Bagalkote, Karnataka
ಬರುವ 2028ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ತಯಾರಿ ಆರಂಭಿಸಲಾಗಿದೆ ಎಂದು ಕೆಪಿಸಿಸಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಎಚ್. ಎಸ್. ಮಂಜುನಾಥ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಯುವ ಕಾಂಗ್ರೆಸ್ ಅಧ್ಯಕ್ಷನಾಗಿ ಅಧಿಕಾರ ಸ್ವೀಕರಿಸಿದ ನಂತರ ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿದ್ದೇನೆ. ಎಲ್ಲೆಡೆ ಪಕ್ಷದ ಕಾರ್ಯಕರ್ತರಲ್ಲಿ ಉತ್ಸಾಹ, ಉಮ್ಮಸ್ಸು ಕಂಡುಬಂದಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಜಾರಿಗೆ ತಂದ ಐದು ಗ್ಯಾರಂಟಿಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯಕ್ಕೆ ಯುವ ಕಾಂಗ್ರೆಸ್ ಮುಂದಾಗಬೇಕು. ಮುಂದಿನ ಚುನಾವಣೆಗೂ ಸಜ್ಜಾಗಬೇಕು ಎಂದರು.
ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ ಸೂಚನೆಯಂತೆ ಈಗಿನಿಂದಲೇ ಸಂಘಟನೆ ಸದೃಢಗೊಳಿಸಿ 2028ರ ಚುನಾವಣೆಗೆ ಬಿರುಸಿನ ತಯಾರಿ ನಡೆಯುತ್ತಿದೆ ಎಂದ ಅವರು, “ಜಮಖಂಡಿಯಲ್ಲಿ ನಮಗೆ ನೀಡಿದ ಅದ್ಭುತ ಸ್ವಾಗತದಿಂದ ಈ ಜಿಲ್ಲೆಯಲ್ಲಿ ಯುವ ಕಾಂಗ್ರೆಸ್ ಎಷ್ಟು ಬಲಿಷ್ಠವಾಗಿದೆ ಎಂಬುದು ಸಾಬೀತಾಗಿದೆ” ಎಂದು ಹೇಳಿದರು.
0
Report
For breaking news and live news updates, like us on Facebook or follow us on Twitter and YouTube . Read more on Latest News on Pinewz.com