Back
Bagalkot587103blurImage

ಪ್ರದಾನಿ ಮೋದಿ ಅಪಮಾನಿಸಿ ಪೋಸ್ಟ್: ಯುವಕನನ್ನು ವಶಕ್ಕೆ ಪಡೆದ ಕಲಾದಗಿ ಪೊಲೀಸರು

Somashekhar
May 22, 2025 13:25:36
Bagalkote, Karnataka
ಬಾಗಲಕೋಟೆ‌ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಸರಿ ಸಮವಸ್ತ್ರದಲ್ಲಿ ಕೈದಿಯಂತೆ ಅಪಮಾನಿಸಿ ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹರಿಬಿಟ್ಟಿದ್ದ ಯುವಕನ ಮೇಲೆ ಬಾಗಲಕೋಟೆ ಜಿಲ್ಲೆಯ ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೊಹಮ್ಮದ್ ಅಜಿಜ್ ಅಬ್ದುಲ್ ಸಾಬ್ ರೋಣ(೨೭) ಎಂಬಾತ ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಮೋದಿ ಅವರನ್ನು ಕೈದಿ ವೇಷದಲ್ಲಿ ಹಾಗೂ ಎಐಎಂಐಎಂ ಮುಖ್ಯಸ್ಥ ಅಸದುದ್ಧೀನ್ ಒವೈಸಿಯನ್ನು ಪೊಲೀಸ್ ವೇಷದಲ್ಲಿ ಬಿಂಬಿಸುವ ಫೋಟೋ ಹಾಕಿದ್ದ. ಇದನ್ನು ಗಮನಿಸಿದ ಪೊಲೀಸರು ಆತನ ಮೇಲೆ ದೂರು ದಾಖಲಿಸಿಕೊಂಡು ವಶಕ್ಕೆ ಪಡೆದು ವಿಚಾರಣೆ ಕೈಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com