Back

Karnataka News- ರಬಕವಿಯಲ್ಲಿ ಎರಡು ಸಾವಿರ ರೂಪಾಯಿಗಳಿಗಾಗಿ ಹೊಟ್ಟೆಗೆ ಕತ್ತರಿ ಇರಿತ
Bagalkote, Karnataka
ಎರಡು ಸಾವಿರ ರೂಪಾಯಿಗಾಗಿ ನಡೆದ ಜಗಳದಲ್ಲಿ ವ್ಯಕ್ತಿಯೋರ್ವನ ಹೊಟ್ಟೆಗೆ ಕತ್ತರಿ ತಾಗಿದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ನಗರದ ಕುಂಚನೂರ್ ಕಾಂಪ್ಲೆಕ್ಸ್ ಬಳಿ ಜರುಗಿದೆ.ಗಾಯಗೊಂಡ ವ್ಯಕ್ತಿಯನ್ನ ಶ್ರೀಧರ ಟರ್ಕಿ(39) ಎಂದು ಗುರ್ತಿಸಲಾಗಿದೆ. ಗಾಯಾಳುವನ್ನ ಜಮಖಂಡಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ವೃತ್ತಿಯಲ್ಲಿ ಟೇಲರ್ ಆಗಿರುವ ಕುಮಾರ ಬಕ್ರೆ ಅವರು ಹೊಟ್ಟೆಗೆ ಕತ್ತರಿ ತಾಗಿಸಿದ್ದಾರೆ ಎಂದು ತಿಳಿದುಬಂದಿದೆ.ಬಾಕಿ ಹಣದ ವಿಚಾರವಾಗಿ ವಾಗ್ವಾದ ನಡೆದು ಕತ್ತರಿ ಇತಿತವಾಗಿದೆ.ಕುಮಾರ್ ಎನ್ನುವ ವ್ಯಕ್ತಿಯನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ
0
Share
Report
For breaking news and live news updates, like us on Facebook or follow us on Twitter and YouTube . Read more on Latest News on Pinewz.com
Bagalkote, Karnataka:
ಮಹಿಳಾ ಸಾಮೂಹಿಕ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕುಂಬಾರಹಳ್ಳ ಗ್ರಾಮದಲ್ಲಿ ನಡೆದಿದೆ. ಮಹಿಳಾ ಸಾಮೂಹಿಕ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಯಾರೋ ಪಾಪಿಗಳು ಶೌಚಾಲಯದಲ್ಲಿ ನವಜಾತ ಶಿಶುವನ್ನ ಎಸೆದು ಹೋಗಿದ್ದಾರೆಂದು ತಿಳಿದು ಬಂದಿದೆ.ಪಾಪಕೃತ್ಯ ಮಾಡಿದವರ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸ್ಥಳಕ್ಕೆ ಗ್ರಾಮೀಣ ಪೊಲಿಸ್ ಠಾಣೆ ಪಿ.ಎಸ್.ಐ ಗಂಗಾಧರ ಪೂಜೇರಿ, ಎ.ಎಸ್.ಐ ಕೆ.ಪಿ.ಸವದತ್ತಿ ಹಾಗೂ ಪೋಲಿಸ್ ತಂಡ ಆಗಮಿಸಿ ಪರಿಶೀಲನೆ ನಡೆಸಿ ಶವ ಪರೀಕ್ಷೆಗಾಗಿ ಸರಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಎಮ್.ಆರ್.ಮೇತ್ರಿ, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಎಸ್.ಎ.ಸಾರವಾನ ಅವರು ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
0
Share
Report
Budoli, Karnataka:
ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪ ಕೊಲೆಯಾದ ಅಬ್ದುಲ್ ರೆಹಮಾನ್ ಕೊಳತ್ತಮಜಲು ಇವರ ಸ್ಮರಣಾರ್ಥ GHM ಫೌಂಡೇಶನ್ ಹಾಗೂ ಮುಹಿಯುದ್ದೀನ್ ಜುಮಾ ಮಸ್ಜಿದ್ ಕೊಳ್ತಮಜಲು, ಎಸ್ ಕೆ ಎಸ್ ಎಸ್ ಎಫ್ ಇವರ ಸಹಯೋಗದಿಂದ ಬ್ಲಡ್ ಡೊನೇಷನ್ ಕ್ಯಾಂಪ್ ಇಂದು ಕೊಳತ್ತಮಜಲು ಮದ್ರಸಾ ಸಭಾಂಗಣದಲ್ಲಿ ನಡೆಯಿತು. ಇದೇ ವೇಳೆ ಜಾತಿ, ಧರ್ಮ ನೋಡದೆ ಸರ್ವಧರ್ಮೀಯರು ಬಂದು ರಕ್ತದಾನ ಮಾಡಿರುವುದು ವಿಶೇಷ ಆಗಿತ್ತು.
0
Share
Report
Mangaluru, Karnataka:
ಜೂನ್ 9 ರಿಂದ ಜೂನ್ 20 ರವರೆಗೆ ದ್ವಿತೀಯ ಪಿ.ಯು.ಸಿ ಪರೀಕ್ಷೆ- 3 ನಡೆಯಲಿದ್ದು, ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಜೂನ್ 9 ರಿಂದ ಜೂನ್ 20 ರವರೆಗೆ ಪರೀಕ್ಷೆ- 3 ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸ್ ವ್ಯಾಪ್ತಿಯ ಪುತ್ತೂರು ತಾಲೂಕಿನ ದರ್ಬೆ ಸೈಂಟ್ ಫಿಲೋಮಿನಾ ಪಿ.ಯು ಕಾಲೇಜು, ಬೆಳ್ತಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಸುಳ್ಯ ತಾಲೂಕಿನ ಗಾಂಧಿನಗರ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಂಟ್ವಾಳ ತಾಲೂಕಿನ ಬಿ ಮೂಡಾ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿμÉೀಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ ಆದೇಶಿಸಿದ್ದಾರೆ.
0
Share
Report
Mangaluru, Karnataka:
ಸುರತ್ಕಲ್ ಖಂಡಿಗೆ ನಂದಿನಿ ನದಿ ತ್ಯಾಜ್ಯದಿಂದ ಮಾಲಿನ್ಯವಾಗುತ್ತಿರುವ ಬಗ್ಗೆ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಬುಧವಾರ ಸ್ಥಳಕ್ಕೆ ಭೇಟಿ ನೀಡಿದರು.
ನಂದಿನಿ ನದಿ ಸೇತುವೆಯಲ್ಲಿ ನಿಂತು ಪರಿಶೀಲನೆ ನಡೆಸಿದ ಅವರು ಸ್ಥಳೀಯರ ಅಹವಾಲು ಆಲಿಸಿದರು. ಕಳೆದ ಹಲವು ವರ್ಷಗಳಿಂದ ನದಿಗೆ ಸ್ಥಳೀಯ ವೈದ್ಯಕೀಯ ಕಾಲೇಜಿನಿಂದ ತ್ಯಾಜ್ಯ ಹರಿದು ಬರುತ್ತಿದೆ. ಸುರತ್ಕಲ್ ವೆಟ್ ವೆಲ್ ನಿಂದಲೂ ತ್ಯಾಜ್ಯವನ್ನು ನೇರವಾಗಿ ಬಿಡಲಾಗುತ್ತಿದೆ ಎಂದು ಸಾರ್ವಜನಿಕರು ಸಚಿವರಿಗೆ ಅಹವಾಲು ಸಲ್ಲಿಸಿದರು.
ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ನದಿ ಮಾಲಿನ್ಯದಿಂದ ಸ್ಥಳೀಯರಿಗೆ ತೀವ್ರ ಸಮಸ್ಯೆ ಆಗಿದೆ. ಇದಕ್ಕೆ ಸಾರ್ವಜನಿಕರು ಹಲವು ಬಾರಿ ಸಂಬಂಧಿಸಿದವರ ಗಮನಕ್ಕೆ ತಂದಿದ್ದರೂ ಸಮಸ್ಯೆ ಪರಿಹಾರವಾಗಿಲ್ಲ ಎಂದು ಸಚಿವರಿಗೆ ತಿಳಿಸಿದರು.
0
Share
Report
Mangaluru, Karnataka:
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬುಧವಾರ ಕಿನ್ನಿಗೋಳಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿದರು.
ಕಿನ್ನಿಗೋಳಿ ಚರ್ಚ್ ಹಾಲ್ನಲ್ಲಿ ನಡೆದ ಕಾರ್ಯಕ್ರಮವನ್ನು ಸಚಿವರು ಉದ್ಘಾಟಿಸಿ ಮಾತನಾಡಿ, ರಾಜ್ಯದ ಎಲ್ಲಾ ತಾಲೂಕು ಮತ್ತು ಹೋಬಳಿ ಕೇಂದ್ರಗಳಲ್ಲಿ ಜನತಾದರ್ಶನ ನಡೆಸಿ ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಅದರಂತೆ ವಿವಿಧ ಪೇಟೆ ಪಟ್ಟಣಗಳಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕ ಆಹಾರ ಸ್ವೀಕರಿಸಲಾಗುತ್ತದೆ ಎಂದು ಅವರು ಹೇಳಿದರು.
ಜನತಾದರ್ಶನದಲ್ಲಿ ಸ್ವೀಕರಿಸಿದ ಸಾರ್ವಜನಿಕ ಅಹವಾಲುಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಮತ್ತು ಪರಿಹಾರ ಕ್ರಮಗಳನ್ನು ಒದಗಿಸಬೇಕು. ಇದರಲ್ಲಿ ವಿಳಂಬ ಸಹಿಸುವುದಿಲ್ಲ ಎಂದು ಸಚಿವರು ತಿಳಿಸಿದರು. ಅಭಿವೃದ್ಧಿಯಲ್ಲಿ ಎಲ್ಲಾ ಪ್ರದೇಶಗಳನ್ನು ಸಮಾನವಾಗಿ ಕಾಣಲಾಗುವುದು. ಕೊರತೆಗಳಿದ್ದರೆ ಅವುಗಳನ್ನು ಸರಿಪಡಿಸಲಾಗುವುದೆಂದು ಸಚಿವರು ತಿಳಿಸಿದರು.
0
Share
Report
Mangaluru, Karnataka:
ಇಂದಿರಾ ಕ್ಯಾಂಟೀನ್ನಲ್ಲಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರವನ್ನು ಒದಗಿಸುವ ಮೂಲಕ ಬಡವರಿಗೆ ಮತ್ತು ಕಾರ್ಮಿಕರಿಗೆ ನೈಜ ಲಾಭ ಒದಗಿಸುವ ದೇಶದ ಮಾದರಿ ಕಾರ್ಯಕ್ರಮವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಅವರು ಬುಧವಾರ ಮೂಡಬಿದ್ರೆ, ಕಿನ್ನಿಗೋಳಿ, ಮುಲ್ಕಿ ವಿವಿಧೆಡೆ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದರು.
ಸಚಿವರು ಮೂಡಬಿದ್ರೆಯಲ್ಲಿ ಮಾತನಾಡಿ ಸರ್ಕಾರದ ಯೋಜನೆಗಳ ಲಾಭವು ನೇರವಾಗಿ ಬಡವರಿಗೆ ತಲುಪಬೇಕು ಎಂಬುದು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಧ್ಯೇಯವಾಗಿತ್ತು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಾಲ್ಯದಲ್ಲಿ ತಾವು ಅನುಭವಿಸಿದ ಹಸಿವಿನ ಸಂಕಟವನ್ನು ಗಮನದಲ್ಲಿಟ್ಟುಕೊಂಡು ಬಡಜನರು ಮತ್ತು ದುರ್ಬಲರು ಹಸಿವಿನಿಂದ ಇರಬಾರದು ಮತ್ತು ಸರಕಾರದ ಯೋಜನೆಗಳ ಲಾಭ ನೇರವಾಗಿ ತಲುಪಬೇಕು ಎಂಬ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಸ್ಥಾಪಿಸಿದರು ಎಂದು ಅವರು ಹೇಳಿದರು.
0
Share
Report
Mangaluru, Karnataka:
ನನಗೆ ಹೊಯ್ಗೆ, ಕಲ್ಲು, ಮಣ್ಣು ವ್ಯಾಪಾರ ಇಲ್ಲ . ನಾನು ಯಾವುದೇ ವ್ಯಾಪಾರ ಇಲ್ಲದ ವ್ಯಕ್ತಿ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.
ನಗರದ ಕಾಂಗ್ರೆಸ್ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಬಕಾರಿ ಸಚಿವನಾಗಿದ್ದರೂ ಒಂದು ವೈನ್ ಶಾಪ್ ಮಾಡಿಲ್ಲ, ಸಾರಿಗೆ ಮಂತ್ರಿ ಅಗಿ ಸೇವೆ ಸಲ್ಲಿಸಿದ್ದರೂ ಒಂದು ಬಸ್ ಕೂಡಾ ನನ್ನಲ್ಲಿ ಇಲ್ಲ ಎಂದು ಹೇಳಿದರು.
ಕೋಮು ಕ್ರಿಮಿನಲ್ಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮವನ್ನು ನಿರೀಕ್ಷಿಸುವ ಕಾಂಗ್ರೆಸ್ ನಾಯಕರು ಮರಳು ದಂಧೆಗೆ ಕಡಿವಾಣ ಹಾಕುವ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಾರೆ ಎಂಬ ಆರೋಪದ ಬಗ್ಗೆ ಗಮನ ಸೆಳೆದಾಗ ಅದು ನನಗೆ ಗೊತ್ತಿಲ್ಲ. ನನ್ನ ಪ್ರಾಮಾಣಿಕತೆಯ ಬಗ್ಗೆ ಪ್ರಶ್ನೆ ಮಾಡಬಹುದು, ನಾನು ಎಲ್ಲ ರೀತಿಯಲ್ಲಿ ಸರಿ ಇದ್ದೇನೆ. ಜಾತ್ಯತೀತ ಸಿದ್ಧಾಂತಕ್ಕೆ ಶಾಶ್ವತವಾಗಿ ಬದ್ಧನಾದ ವ್ಯಕ್ತಿ. ಜಿಲ್ಲೆಯಲ್ಲಿ ಶಾಂತಿ ನೆಲೆಸಬೇಕು ಎನ್ನುವುದು ನನ್ನ ಆಗ್ರಹವಾಗಿದೆ ಎಂದರು.
0
Share
Report
Mangaluru, Karnataka:
ಅಪರೇಶನ್ ಸಿಂಧೂರ ಹಿನ್ನೆಲೆಯಲ್ಲಿ ವಿದೇಶಗಳಿಗೆ ತೆರಳಿದ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸಿ ಮಂಗಳೂರಿಗೆ ಆಗಮಿಸಿದ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರಿಗೆ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬುಧವಾರ ಅಭಿನಂದನಾ ಕಾರ್ಯಕ್ರಮ ನೆರವೇರಿತು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಂಸದರು, ಆಪರೇಶನ್ ಸಿಂದೂರ ಮೂಲಕ ವಿಶ್ವದ ಯಾವುದೇ ದೇಶ ಮಾಡದ ಕಾರ್ಯಾಚರಣೆಯನ್ನು ಭಾರತೀಯ ಸೇನೆ ಮಾಡಿದೆ. ವೃತ್ತಿಪರತೆಯುಳ್ಳ ಸೇನೆ, ಪ್ರಧಾನಿ ಮೋದಿ ಅವರ ಜವಾಬ್ದಾರಿಯುತ ನಾಯಕತ್ವದಿಂದ ಈ ಯಶಸ್ವಿ ಕಾರ್ಯಾಚರಣೆ ಸಾಧ್ಯವಾಗಿದೆ ಎಂದರು.
0
Share
Report
Mangaluru, Karnataka:
ದಕ್ಷಿಣ ಏಷ್ಯಾದ ರೋಟಾರೆಕ್ಟ್ ಚಟುವಟಿಕೆಗಳ ಕೇಂದ್ರ RSAMDIO ( ರೋಟಾರೆಕ್ಟ್ ಸೌತ್ ಏಷಿಯಾ ಮಲ್ಟಿ-ಡಿಸ್ಟ್ರಿಕ್ಟ್ ಇನ್ಫಾ ರ್ಮೇಶನ್ ಆರ್ಗನೈಸೇಷನ)2025–26ನೇ ಸಾಲಿನ ಪದಗ್ರಹಣ ಸಮಾರಂಭ ಪ್ರಶಸ್ತಿ ಪ್ರಧಾನ ಸಮಾರಂಭ ಮಂಗಳೂರಿನ ಆವತಾರ್ ಹೋಟೆಲ್ನಲ್ಲಿ ಜೂನ್ 7 ಮತ್ತು 8 ರಂದು ಸಂಜೆ 3:30 ಗಂಟೆಯಿಂದ ಆರಂಭವಾಗಿದೆ.
ಈ ಸಮಾರಂಭ ಕರ್ನಾಟಕದಲ್ಲಿ ಮೊತ್ತ ಮೊದಲ ಬಾರಿಗೆ ನಡೆಯುತ್ತಿದೆ ಎಂದು ಪಿಡಿಜಿ ಎಂಡಿ ಡಾ. ಬಿ. ದೇವದಾಸ್ ರೈ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಈ ಸಮಾವೇಶದಲ್ಲಿ 3 ದೇಶಗಳು ಮತ್ತು 23 ರಾಜ್ಯಗಳಿಂದ 250 ಕ್ಕೂ ಹೆಚ್ಚು ರೋಟಾರೆಕ್ಟ್ ಪ್ರತಿನಿಧಿ ಗಳು ಭಾಗವಹಿಸಲಿರುವ ಈ 2 ದಿನಗಳ ಕಾರ್ಯಕ್ರಮದ ಮುಖ್ಯ ಅತಿಥಿ ಯಾಗಿ ರೋಟರಿ ಇಂಟರ್ ನ್ಯಾಷನಲ್ ಡೈರೆಕ್ಟರ್ ಅನಿರುದ್ಧ ರಾಯ್ ಚೌಧುರಿ ಅವರು ಭಾಗವಹಿಸಿ ಪ್ರಧಾನ ಭಾಷಣ ನೀಡಲಿದ್ದಾರೆ. ಗೌರವಾನ್ವಿತ ಅತಿಥಿಯಾಗಿ RI ಜಿಲ್ಲೆ 3181 ರ ಜಿಲ್ಲಾ ಗವರ್ನರ್ ವಿಕ್ರಮದತ್ತ ಅವರು ಭಾಗವಹಿಸಲಿ ದ್ದಾರೆ ಎಂದವರು ತಿಳಿಸಿದ್ದಾರೆ.
0
Share
Report