ಖಾಸಗಿ ಫೈನಾನ್ಸ್ ನವರಿಂದ ಕಿರುಕುಳ ನಗರದಲ್ಲಿ ಮುತ್ತಿಗೆ ಗ್ರಾಮಸ್ಥರಿಂದ ಆರೋಪ
ಖಾಸಗಿ ಫೈನಾನ್ಸ್ ನವರಿಂದ ಕಿರುಕುಳ ನಗರದಲ್ಲಿ ಮುತ್ತಿಗೆ ಗ್ರಾಮಸ್ಥರಿಂದ ಆರೋಪ ಬುಧವಾರ ಮಧ್ಯಾಹ್ನ ಎರಡು ಗಂಟೆ ಸಮಯದಲ್ಲಿ ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮುತ್ತಿಗೆ ಗ್ರಾಮದ ಲಕ್ಷ್ಮೀ ಪುಟ್ಟಸ್ವಾಮಿ ಮಾತನಾಡಿ ಖಾಸಗಿ ಮೈಕ್ರೋಫೈನಾನ್ಸ್ ಹಾಗೂ ಸಂಘ ಸಂಸ್ಥೆಗಳಲ್ಲಿ ಸಾಲ ಪಡೆದುಕೊಂಡು ಅದನ್ನು ಮರು ಪಾವತಿ ಮಾಡುತ್ತಾ ಬರುತ್ತಿದ್ದೇವೆ. ಈ ನಡುವೆ ಕೆಳ ದಿನಗಳ ಹಿಂದೆ ನಿರಂತರವಾಗಿ ಮಳೆ ಬಂದ ಪರಿಣಾಮ ಕೆಲಸ ಸಿಗದೇ ಸಾಲವನ್ನು ಕಟ್ಟಲು ಆಗಲಿಲ್ಲ. ಆದರೆ ಈಗ ಫೈನಾನ್ಸ್ ನವರು ಸಾಲ ಕಟ್ಟಿ ಕಿರುಕುಳ ನೀಡುತ್ತಿದ್ದಾರೆ ಎಂದು
For breaking news and live news updates, like us on Facebook or follow us on Twitter and YouTube . Read more on Latest News on Pinewz.com
ಎರಡು ಸಾವಿರ ರೂಪಾಯಿಗಾಗಿ ನಡೆದ ಜಗಳದಲ್ಲಿ ವ್ಯಕ್ತಿಯೋರ್ವನ ಹೊಟ್ಟೆಗೆ ಕತ್ತರಿ ತಾಗಿದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ನಗರದ ಕುಂಚನೂರ್ ಕಾಂಪ್ಲೆಕ್ಸ್ ಬಳಿ ಜರುಗಿದೆ.ಗಾಯಗೊಂಡ ವ್ಯಕ್ತಿಯನ್ನ ಶ್ರೀಧರ ಟರ್ಕಿ(39) ಎಂದು ಗುರ್ತಿಸಲಾಗಿದೆ. ಗಾಯಾಳುವನ್ನ ಜಮಖಂಡಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ವೃತ್ತಿಯಲ್ಲಿ ಟೇಲರ್ ಆಗಿರುವ ಕುಮಾರ ಬಕ್ರೆ ಅವರು ಹೊಟ್ಟೆಗೆ ಕತ್ತರಿ ತಾಗಿಸಿದ್ದಾರೆ ಎಂದು ತಿಳಿದುಬಂದಿದೆ.ಬಾಕಿ ಹಣದ ವಿಚಾರವಾಗಿ ವಾಗ್ವಾದ ನಡೆದು ಕತ್ತರಿ ಇತಿತವಾಗಿದೆ.ಕುಮಾರ್ ಎನ್ನುವ ವ್ಯಕ್ತಿಯನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ