ಬಿ ಆರ್ ಟಿ ಅರಣ್ಯದಲ್ಲಿ ಗಂಡು ಆನೆ ಕಳೆಬರಹ ಪತ್ತೆ.
27-08-2024 ರಂದು, ಚಾಮರಾಜನಗರದ ಯಳಂದೂರು ವನ್ಯಜೀವಿ ವಲಯದ ಬೇತಾಳಕಟ್ಟೆಗಸಿನಲ್ಲಿ ಬಿ.ಆರ್.ಟಿ. ಹುಲಿ ಸಂರಕ್ಷಿತ ಪ್ರದೇಶದ ಸಿಬ್ಬಂದಿಗಳು ಆಳಶೆಟ್ಟಿಕಟ್ಟೆ ಮೂಲೆ ಎಂಬ ಅರಣ್ಯ ಪ್ರದೇಶದಲ್ಲಿ 40 ವರ್ಷದ ಗಂಡಾನೆಯ ಮೃತದೇಹವನ್ನು ಪತ್ತೆಹಚ್ಚಿದರು. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಟಿ. ಹಿರೇಲಾಲ್ ಮತ್ತು ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀ ಶ್ರೀಪತಿ ಸ್ಥಳಕ್ಕೆ ಭೇಟಿ ನೀಡಿ ಪ್ರಾಥಮಿಕ ಪರಿಶೀಲನೆ ನಡೆಸಿದರು. ಗಂಡಾನೆಯು 15 ರಿಂದ 20 ದಿನಗಳ ಹಿಂದೆ ಸ್ವಾಭಾವಿಕವಾಗಿ ಮೃತಪಟ್ಟಿರುವಂತೆ ಕಾಣುತ್ತಿದೆ. ದಂತಗಳು ಸುರಕ್ಷಿತವಾಗಿವೆ.
For breaking news and live news updates, like us on Facebook or follow us on Twitter and YouTube . Read more on Latest News on Pinewz.com
ಎರಡು ಸಾವಿರ ರೂಪಾಯಿಗಾಗಿ ನಡೆದ ಜಗಳದಲ್ಲಿ ವ್ಯಕ್ತಿಯೋರ್ವನ ಹೊಟ್ಟೆಗೆ ಕತ್ತರಿ ತಾಗಿದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ನಗರದ ಕುಂಚನೂರ್ ಕಾಂಪ್ಲೆಕ್ಸ್ ಬಳಿ ಜರುಗಿದೆ.ಗಾಯಗೊಂಡ ವ್ಯಕ್ತಿಯನ್ನ ಶ್ರೀಧರ ಟರ್ಕಿ(39) ಎಂದು ಗುರ್ತಿಸಲಾಗಿದೆ. ಗಾಯಾಳುವನ್ನ ಜಮಖಂಡಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ವೃತ್ತಿಯಲ್ಲಿ ಟೇಲರ್ ಆಗಿರುವ ಕುಮಾರ ಬಕ್ರೆ ಅವರು ಹೊಟ್ಟೆಗೆ ಕತ್ತರಿ ತಾಗಿಸಿದ್ದಾರೆ ಎಂದು ತಿಳಿದುಬಂದಿದೆ.ಬಾಕಿ ಹಣದ ವಿಚಾರವಾಗಿ ವಾಗ್ವಾದ ನಡೆದು ಕತ್ತರಿ ಇತಿತವಾಗಿದೆ.ಕುಮಾರ್ ಎನ್ನುವ ವ್ಯಕ್ತಿಯನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ