Back

2025–26ನೇ ಸಾಲಿನ ಪದಗ್ರಹಣ ಸಮಾರಂಭ ಪ್ರಶಸ್ತಿ ಪ್ರದಾನ ಸಮಾರಂಭ
Mangaluru, Karnataka
ದಕ್ಷಿಣ ಏಷ್ಯಾದ ರೋಟಾರೆಕ್ಟ್ ಚಟುವಟಿಕೆಗಳ ಕೇಂದ್ರ RSAMDIO ( ರೋಟಾರೆಕ್ಟ್ ಸೌತ್ ಏಷಿಯಾ ಮಲ್ಟಿ-ಡಿಸ್ಟ್ರಿಕ್ಟ್ ಇನ್ಫಾ ರ್ಮೇಶನ್ ಆರ್ಗನೈಸೇಷನ)2025–26ನೇ ಸಾಲಿನ ಪದಗ್ರಹಣ ಸಮಾರಂಭ ಪ್ರಶಸ್ತಿ ಪ್ರಧಾನ ಸಮಾರಂಭ ಮಂಗಳೂರಿನ ಆವತಾರ್ ಹೋಟೆಲ್ನಲ್ಲಿ ಜೂನ್ 7 ಮತ್ತು 8 ರಂದು ಸಂಜೆ 3:30 ಗಂಟೆಯಿಂದ ಆರಂಭವಾಗಿದೆ.
ಈ ಸಮಾರಂಭ ಕರ್ನಾಟಕದಲ್ಲಿ ಮೊತ್ತ ಮೊದಲ ಬಾರಿಗೆ ನಡೆಯುತ್ತಿದೆ ಎಂದು ಪಿಡಿಜಿ ಎಂಡಿ ಡಾ. ಬಿ. ದೇವದಾಸ್ ರೈ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಈ ಸಮಾವೇಶದಲ್ಲಿ 3 ದೇಶಗಳು ಮತ್ತು 23 ರಾಜ್ಯಗಳಿಂದ 250 ಕ್ಕೂ ಹೆಚ್ಚು ರೋಟಾರೆಕ್ಟ್ ಪ್ರತಿನಿಧಿ ಗಳು ಭಾಗವಹಿಸಲಿರುವ ಈ 2 ದಿನಗಳ ಕಾರ್ಯಕ್ರಮದ ಮುಖ್ಯ ಅತಿಥಿ ಯಾಗಿ ರೋಟರಿ ಇಂಟರ್ ನ್ಯಾಷನಲ್ ಡೈರೆಕ್ಟರ್ ಅನಿರುದ್ಧ ರಾಯ್ ಚೌಧುರಿ ಅವರು ಭಾಗವಹಿಸಿ ಪ್ರಧಾನ ಭಾಷಣ ನೀಡಲಿದ್ದಾರೆ. ಗೌರವಾನ್ವಿತ ಅತಿಥಿಯಾಗಿ RI ಜಿಲ್ಲೆ 3181 ರ ಜಿಲ್ಲಾ ಗವರ್ನರ್ ವಿಕ್ರಮದತ್ತ ಅವರು ಭಾಗವಹಿಸಲಿ ದ್ದಾರೆ ಎಂದವರು ತಿಳಿಸಿದ್ದಾರೆ.
0
Share
Report
For breaking news and live news updates, like us on Facebook or follow us on Twitter and YouTube . Read more on Latest News on Pinewz.com
Mangaluru, Karnataka:
ಜೂನ್ 9 ರಿಂದ ಜೂನ್ 20 ರವರೆಗೆ ದ್ವಿತೀಯ ಪಿ.ಯು.ಸಿ ಪರೀಕ್ಷೆ- 3 ನಡೆಯಲಿದ್ದು, ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಜೂನ್ 9 ರಿಂದ ಜೂನ್ 20 ರವರೆಗೆ ಪರೀಕ್ಷೆ- 3 ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸ್ ವ್ಯಾಪ್ತಿಯ ಪುತ್ತೂರು ತಾಲೂಕಿನ ದರ್ಬೆ ಸೈಂಟ್ ಫಿಲೋಮಿನಾ ಪಿ.ಯು ಕಾಲೇಜು, ಬೆಳ್ತಂಗಡಿ ಸರ್ಕಾರಿ ಪದವಿ ಪೂರ್ವ ಕಾಲೇಜು, ಸುಳ್ಯ ತಾಲೂಕಿನ ಗಾಂಧಿನಗರ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಂಟ್ವಾಳ ತಾಲೂಕಿನ ಬಿ ಮೂಡಾ ಸರ್ಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿμÉೀಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ ಆದೇಶಿಸಿದ್ದಾರೆ.
0
Share
Report
Mangaluru, Karnataka:
ಸುರತ್ಕಲ್ ಖಂಡಿಗೆ ನಂದಿನಿ ನದಿ ತ್ಯಾಜ್ಯದಿಂದ ಮಾಲಿನ್ಯವಾಗುತ್ತಿರುವ ಬಗ್ಗೆ ಸಾರ್ವಜನಿಕ ದೂರುಗಳ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಬುಧವಾರ ಸ್ಥಳಕ್ಕೆ ಭೇಟಿ ನೀಡಿದರು.
ನಂದಿನಿ ನದಿ ಸೇತುವೆಯಲ್ಲಿ ನಿಂತು ಪರಿಶೀಲನೆ ನಡೆಸಿದ ಅವರು ಸ್ಥಳೀಯರ ಅಹವಾಲು ಆಲಿಸಿದರು. ಕಳೆದ ಹಲವು ವರ್ಷಗಳಿಂದ ನದಿಗೆ ಸ್ಥಳೀಯ ವೈದ್ಯಕೀಯ ಕಾಲೇಜಿನಿಂದ ತ್ಯಾಜ್ಯ ಹರಿದು ಬರುತ್ತಿದೆ. ಸುರತ್ಕಲ್ ವೆಟ್ ವೆಲ್ ನಿಂದಲೂ ತ್ಯಾಜ್ಯವನ್ನು ನೇರವಾಗಿ ಬಿಡಲಾಗುತ್ತಿದೆ ಎಂದು ಸಾರ್ವಜನಿಕರು ಸಚಿವರಿಗೆ ಅಹವಾಲು ಸಲ್ಲಿಸಿದರು.
ಶಾಸಕ ಉಮಾನಾಥ ಕೋಟ್ಯಾನ್ ಮಾತನಾಡಿ ನದಿ ಮಾಲಿನ್ಯದಿಂದ ಸ್ಥಳೀಯರಿಗೆ ತೀವ್ರ ಸಮಸ್ಯೆ ಆಗಿದೆ. ಇದಕ್ಕೆ ಸಾರ್ವಜನಿಕರು ಹಲವು ಬಾರಿ ಸಂಬಂಧಿಸಿದವರ ಗಮನಕ್ಕೆ ತಂದಿದ್ದರೂ ಸಮಸ್ಯೆ ಪರಿಹಾರವಾಗಿಲ್ಲ ಎಂದು ಸಚಿವರಿಗೆ ತಿಳಿಸಿದರು.
0
Share
Report
Mangaluru, Karnataka:
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬುಧವಾರ ಕಿನ್ನಿಗೋಳಿಯಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಿದರು.
ಕಿನ್ನಿಗೋಳಿ ಚರ್ಚ್ ಹಾಲ್ನಲ್ಲಿ ನಡೆದ ಕಾರ್ಯಕ್ರಮವನ್ನು ಸಚಿವರು ಉದ್ಘಾಟಿಸಿ ಮಾತನಾಡಿ, ರಾಜ್ಯದ ಎಲ್ಲಾ ತಾಲೂಕು ಮತ್ತು ಹೋಬಳಿ ಕೇಂದ್ರಗಳಲ್ಲಿ ಜನತಾದರ್ಶನ ನಡೆಸಿ ಸಾರ್ವಜನಿಕರ ಅಹವಾಲುಗಳಿಗೆ ಸ್ಪಂದಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಅದರಂತೆ ವಿವಿಧ ಪೇಟೆ ಪಟ್ಟಣಗಳಲ್ಲಿ ಜನತಾ ದರ್ಶನ ನಡೆಸಿ ಸಾರ್ವಜನಿಕ ಆಹಾರ ಸ್ವೀಕರಿಸಲಾಗುತ್ತದೆ ಎಂದು ಅವರು ಹೇಳಿದರು.
ಜನತಾದರ್ಶನದಲ್ಲಿ ಸ್ವೀಕರಿಸಿದ ಸಾರ್ವಜನಿಕ ಅಹವಾಲುಗಳಿಗೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಮತ್ತು ಪರಿಹಾರ ಕ್ರಮಗಳನ್ನು ಒದಗಿಸಬೇಕು. ಇದರಲ್ಲಿ ವಿಳಂಬ ಸಹಿಸುವುದಿಲ್ಲ ಎಂದು ಸಚಿವರು ತಿಳಿಸಿದರು. ಅಭಿವೃದ್ಧಿಯಲ್ಲಿ ಎಲ್ಲಾ ಪ್ರದೇಶಗಳನ್ನು ಸಮಾನವಾಗಿ ಕಾಣಲಾಗುವುದು. ಕೊರತೆಗಳಿದ್ದರೆ ಅವುಗಳನ್ನು ಸರಿಪಡಿಸಲಾಗುವುದೆಂದು ಸಚಿವರು ತಿಳಿಸಿದರು.
0
Share
Report
Mangaluru, Karnataka:
ಇಂದಿರಾ ಕ್ಯಾಂಟೀನ್ನಲ್ಲಿ ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಊಟ ಮತ್ತು ಉಪಹಾರವನ್ನು ಒದಗಿಸುವ ಮೂಲಕ ಬಡವರಿಗೆ ಮತ್ತು ಕಾರ್ಮಿಕರಿಗೆ ನೈಜ ಲಾಭ ಒದಗಿಸುವ ದೇಶದ ಮಾದರಿ ಕಾರ್ಯಕ್ರಮವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಅವರು ಬುಧವಾರ ಮೂಡಬಿದ್ರೆ, ಕಿನ್ನಿಗೋಳಿ, ಮುಲ್ಕಿ ವಿವಿಧೆಡೆ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಮಾತನಾಡಿದರು.
ಸಚಿವರು ಮೂಡಬಿದ್ರೆಯಲ್ಲಿ ಮಾತನಾಡಿ ಸರ್ಕಾರದ ಯೋಜನೆಗಳ ಲಾಭವು ನೇರವಾಗಿ ಬಡವರಿಗೆ ತಲುಪಬೇಕು ಎಂಬುದು ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರ ಧ್ಯೇಯವಾಗಿತ್ತು. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಾಲ್ಯದಲ್ಲಿ ತಾವು ಅನುಭವಿಸಿದ ಹಸಿವಿನ ಸಂಕಟವನ್ನು ಗಮನದಲ್ಲಿಟ್ಟುಕೊಂಡು ಬಡಜನರು ಮತ್ತು ದುರ್ಬಲರು ಹಸಿವಿನಿಂದ ಇರಬಾರದು ಮತ್ತು ಸರಕಾರದ ಯೋಜನೆಗಳ ಲಾಭ ನೇರವಾಗಿ ತಲುಪಬೇಕು ಎಂಬ ಉದ್ದೇಶದಿಂದ ಇಂದಿರಾ ಕ್ಯಾಂಟೀನ್ ಸ್ಥಾಪಿಸಿದರು ಎಂದು ಅವರು ಹೇಳಿದರು.
0
Share
Report
Mangaluru, Karnataka:
ನನಗೆ ಹೊಯ್ಗೆ, ಕಲ್ಲು, ಮಣ್ಣು ವ್ಯಾಪಾರ ಇಲ್ಲ . ನಾನು ಯಾವುದೇ ವ್ಯಾಪಾರ ಇಲ್ಲದ ವ್ಯಕ್ತಿ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.
ನಗರದ ಕಾಂಗ್ರೆಸ್ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಬಕಾರಿ ಸಚಿವನಾಗಿದ್ದರೂ ಒಂದು ವೈನ್ ಶಾಪ್ ಮಾಡಿಲ್ಲ, ಸಾರಿಗೆ ಮಂತ್ರಿ ಅಗಿ ಸೇವೆ ಸಲ್ಲಿಸಿದ್ದರೂ ಒಂದು ಬಸ್ ಕೂಡಾ ನನ್ನಲ್ಲಿ ಇಲ್ಲ ಎಂದು ಹೇಳಿದರು.
ಕೋಮು ಕ್ರಿಮಿನಲ್ಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮವನ್ನು ನಿರೀಕ್ಷಿಸುವ ಕಾಂಗ್ರೆಸ್ ನಾಯಕರು ಮರಳು ದಂಧೆಗೆ ಕಡಿವಾಣ ಹಾಕುವ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಾರೆ ಎಂಬ ಆರೋಪದ ಬಗ್ಗೆ ಗಮನ ಸೆಳೆದಾಗ ಅದು ನನಗೆ ಗೊತ್ತಿಲ್ಲ. ನನ್ನ ಪ್ರಾಮಾಣಿಕತೆಯ ಬಗ್ಗೆ ಪ್ರಶ್ನೆ ಮಾಡಬಹುದು, ನಾನು ಎಲ್ಲ ರೀತಿಯಲ್ಲಿ ಸರಿ ಇದ್ದೇನೆ. ಜಾತ್ಯತೀತ ಸಿದ್ಧಾಂತಕ್ಕೆ ಶಾಶ್ವತವಾಗಿ ಬದ್ಧನಾದ ವ್ಯಕ್ತಿ. ಜಿಲ್ಲೆಯಲ್ಲಿ ಶಾಂತಿ ನೆಲೆಸಬೇಕು ಎನ್ನುವುದು ನನ್ನ ಆಗ್ರಹವಾಗಿದೆ ಎಂದರು.
0
Share
Report
Mangaluru, Karnataka:
ಅಪರೇಶನ್ ಸಿಂಧೂರ ಹಿನ್ನೆಲೆಯಲ್ಲಿ ವಿದೇಶಗಳಿಗೆ ತೆರಳಿದ ಸರ್ವಪಕ್ಷಗಳ ನಿಯೋಗದಲ್ಲಿ ಭಾಗವಹಿಸಿ ಮಂಗಳೂರಿಗೆ ಆಗಮಿಸಿದ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರಿಗೆ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆ ವತಿಯಿಂದ ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬುಧವಾರ ಅಭಿನಂದನಾ ಕಾರ್ಯಕ್ರಮ ನೆರವೇರಿತು.
ಅಭಿನಂದನೆ ಸ್ವೀಕರಿಸಿ ಮಾತನಾಡಿದ ಸಂಸದರು, ಆಪರೇಶನ್ ಸಿಂದೂರ ಮೂಲಕ ವಿಶ್ವದ ಯಾವುದೇ ದೇಶ ಮಾಡದ ಕಾರ್ಯಾಚರಣೆಯನ್ನು ಭಾರತೀಯ ಸೇನೆ ಮಾಡಿದೆ. ವೃತ್ತಿಪರತೆಯುಳ್ಳ ಸೇನೆ, ಪ್ರಧಾನಿ ಮೋದಿ ಅವರ ಜವಾಬ್ದಾರಿಯುತ ನಾಯಕತ್ವದಿಂದ ಈ ಯಶಸ್ವಿ ಕಾರ್ಯಾಚರಣೆ ಸಾಧ್ಯವಾಗಿದೆ ಎಂದರು.
0
Share
Report
Mangaluru, Karnataka:
ದೇರಳಕಟ್ಟೆ ಸಮೀಪದ ಕಣಚೂರು ಮೆಡಿಕಲ್ ಕಾಲೇಜಿಗೆ ಅನಾಮಿಕ ವ್ಯಕ್ತಿಯೊಬ್ಬ ಕರೆ ಮಾಡಿ ಬಾಂಬ್ ಬೆದರಿಕೆಯೊಡ್ಡಿದ ಘಟನೆ ಬುಧವಾರ ನಡೆದಿದ್ದು,ಬಳಿಕ ಬಾಂಬ್ ನಿಷ್ಕ್ರಿಯ ದಳ,ಪೊಲೀಸರು ತನಿಖೆ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಬೆದರಿಕೆ ಕರೆಯ ಬಗ್ಗೆ ಆಸ್ಪತ್ರೆಯ ಆಡಳಿತಾಧಿಕಾರಿಗಳು ಪೊಲೀಸರಿಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಆಸ್ಪತ್ರೆ ಹಾಗೂ ಕಾಲೇಜನ್ನು ಪರಿಶೀಲಿಸಿ ಇದೊಂದು ಹುಸಿ ಬಾಂಬ್ ಕರೆ ಎಂದು ತಿಳಿಸಿದ್ದಾರೆ.
ಬುಧವಾರ ಬೆಳಿಗ್ಗೆ 8.15ರ ಹೊತ್ತಿಗೆ ದೂರವಾಣಿ ಕರೆ ಬಂದಿದ್ದು. ಅದರಲ್ಲಿ ಬೆಳಿಗ್ಗೆ 11 ಗಂಟೆಗೆ ಬಾಂಬು ಬ್ಲಾಸ್ಟ್ ಮಾಡುವುದಾಗಿ ಹಾಗೂ ಎಲ್ಲರನ್ನು ಆಸ್ಪತ್ರೆ ಯಿಂದ ಹೊರಗೆ ಕಳುಹಿಸುವಂತೆ ಬೆದರಿಕೆ ಹಾಕಿದ್ದರು ಎನ್ನಲಾಗಿದೆ.
ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಮೊಬೈಲ್ ನಂಬರ್ ಪರಿಶೀಲಿಸಿ ಆರೋಪಿಗಳ ಪತ್ತೆಗಾಗಿ ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.
0
Share
Report
Mangaluru, Karnataka:
ದಿನಾಂಕ 05.06.2025 ರಂದು ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 01:00 ಗಂಟೆಯವರೆಗೆ 110/33/11ಕೆವಿ ನೆಹರೂಮೈದಾನ ಉಪಕೇಂದ್ರದಿಂದ ಹೊರಡುವ 11ಕೆವಿ ಸೌತ್ ವಾರ್ಫ್ ಫೀಡರಿನಲ್ಲಿ ಹಾಲಿ ಇರುವ ನೆಹರೂಮೈದಾನ್ 2*5ಎಂವಿಎ 33/11ಕೆವಿ ಉಪಕೇಂದ್ರವನ್ನು 1*20ಎಂವಿಎ 110/33ಕೆವಿ ಹಾಗೂ 2*10ಎಂವಿಎ 110/11ಕೆವಿ ಜಿಐಎಸ್ ವಿದ್ಯುತ್ ಉಪಕೇಂದ್ರವನ್ನಾಗಿ ಉನ್ನತೀಕರಿಸುವ ಮತ್ತು ಬಿಜೈ 110ಕೆವಿ ವಿದ್ಯುತ್ ಉಪಕೇಂದ್ರದಿಂದ 110ಕೆವಿ ಭೂಗತ ಕೇಬಲ್(3.665ಕಿ.ಮೀ) ಅಳವಡಿಕೆ ಹಾಗೂ ಬಿಜೈ 110ಕೆವಿ ವಿದ್ಯುತ್ ಉಪಕೇಂದ್ರದಲ್ಲಿ ಒಂದು ಸಂಖ್ಯೆಯ 110ಕೆವಿ ಟರ್ಮಿನಲ್ ಬೇ ಅಳವಡಿಕೆ ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಡಿ.ಸಿ ಆಫೀಸ್, ಉಪಧಕ್ಕೆ, ಪೋರ್ಟ್ ರಸ್ತೆ, ಧಕ್ಕೆ, ನೀರೇಶ್ವಾಲ್ಯ ರಸ್ತೆ, ಗೂಡ್ ಶೆಡ್ ರಸ್ತೆ, ಬದ್ರಿಯಾ ಓಲ್ಡ್ ಪೋರ್ಟ್, ಬಿ.ಎಂ. ಕ್ರಾಸ್ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.
0
Share
Report
Mangaluru, Karnataka:
ದಿನಾಂಕ 05.06.2025 ರಂದು ಬೆಳಿಗ್ಗೆ 10.00 ರಿಂದ ಸಂಜೆ 05:00 ಗಂಟೆಯವರೆಗೆ 33/11ಕೆವಿ ಅತ್ತಾವರ ಉಪಕೇಂದ್ರದಿಂದ ಹೊರಡುವ 11ಕೆವಿ ಮಿತ್ತಮೊಗರು ಫೀಡರ್ ಮತ್ತು 33/11ಕೆವಿ ಕಂಕನಾಡಿ ಉಪಕೇಂದ್ರದಿಂದ ಹೊರಡುವ 11ಕೆವಿ ಫಳ್ನೀರ್ ಫೀಡರುಗಳಲ್ಲಿ ಮಾದರಿ ಉಪವಿಭಾಗದ ಯೋಜನೆಯಡಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಕಾಪ್ರಿಗುಡ್ಡ, ಮಿತ್ತಮೊಗರು, ಹೈಲ್ಯಾಂಡ್, ಯುನಿಟಿ ಹಾಸ್ಪಿಟಲ್, ಸೈಂಟ್ ಮೆರೀಸ್ ಸ್ಕೂಲ್, ವಾಸ್ಲೇನ್, ಬಲ್ಮಠ ಮಿಷನ್ ಕಂಪೌಂಡ್, ಬಲ್ಮಠ ನ್ಯೂರೋಡ್, ಅಥೆನಾ ಹಾಸ್ಪಿಟಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.
0
Share
Report