Back
Dakshina Kannada574201blurImage

ಸಂಘಪರಿವಾರದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ

Shamsheer
Oct 24, 2024 01:02:30
Puttur, Karnataka
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಇಂದು ನಡೆದ ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ, ಕಾಂಗ್ರೆಸ್ ನ‌ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಭಾಗಿಯಾಗಿ ಅಚ್ವರಿ ಮೂಡಿಸಿದ್ರು. ವಿಶ್ವ ಹಿಂದೂ ಪರಿಷತ್ ನ ನೂತನ ಜಿಲ್ಲಾ ಕಾರ್ಯಾಲಯ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಬುಧವಾರ ಪುತ್ತೂರಿನ ವಿಹಿಂಪ ನಿವೇಶನದಲ್ಲಿ ನಡೆದಿದ್ದು, ಕಾರ್ಯಕ್ರಮದಲ್ಲಿ ಪುತ್ತೂರಿನ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಮತ್ತು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ಭಾಗವಹಿಸಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಶಾಸಕ ಅಶೋಕ್ ರೈಯವರನ್ನು ಸಂಘಟಕರು ಶಾಲು ಹೊದಿಸಿ ಗೌರವಿಸಿದರು.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com