Back
Dakshina Kannada574199blurImage

Dakshina kannada - ಮಂಗಳೂರಲ್ಲಿ ಲಂಚ ಸ್ವೀಕಾರ: ಲೋಕಾಯುಕ್ತ ದಾಳಿ

Shamsheer
May 28, 2025 14:33:01
Karnataka
ಕಟ್ಟಡ ಕಲ್ಲು ತೆಗೆಯಲು ಅನುಮತಿ ನೀಡಲು ಲಂಚ ಸ್ವೀಕರಿಸುತ್ತಿದ್ದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಮತ್ತು ಸಿಬ್ಬಂಧಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.ಪಿರ್ಯಾದಿದಾರರ ಹೆಸರಿಗೆ ಜಿ.ಪಿ.ಎ ಆಗಿರುವ ತಮ್ಮ ಪರಿಚಯದವರ ಹೆಸರಿನಲ್ಲಿ ಇರುವ ಉಳ್ಳಾಲ ತಾಲೂಕು ಇರಾ ಗ್ರಾಮದ ಸರ್ವೆ ನಂಬ್ರ 279/5 ರಲ್ಲಿ 1.39 ಎಕರೆ ವಿಸ್ತೀರ್ಣದ ಜಮೀನಿನ ಪೈಕಿ 0.35 ಎಕರೆ ಪ್ರದೇಶದಲ್ಲಿ ಮನೆಯನ್ನು ಕಟ್ಟುವ ಉದ್ದೇಶದಿಂದ ಕಟ್ಟಡಕಲ್ಲು ತೆಗೆದು ಸಮತಟ್ಟು ಮಾಡಲು ಅನುಮತಿ ನೀಡಲು ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ 2024ರ ಅಕ್ಟೋಬರ್ 28ರಂದು  ಅರ್ಜಿಯನ್ನು ಸಲ್ಲಿಸಿರುತ್ತಾರೆ. ಉಳ್ಳಾಲ ತಾಲೂಕು ತಹಶೀಲ್ದಾರ್ ರವರು ಸಮತಟ್ಟು ಮಾಡುವ ಸಲುವಾಗಿ ಜಮೀನಿನಲ್ಲಿ ಲಭ್ಯವಿರುವ ಕಟ್ಟಡಕಲ್ಲು ತೆಗೆಯಲು ಪ್ರಮಾಣಪತ್ರ/ದೃಢಿಕರಣ ಪತ್ರ ನೀಡಬಹುದಾಗಿದೆ ಎಂಬುದಾಗಿ ಮಾರ್ಚ್ 21 ರಂದು ವರದಿ ಸಲ್ಲಿಸಿದ್ದರೂ ಕೂಡ ಗಣಿ ಇಲಾಖೆಯಿಂದ ಅನುಮತಿ ನೀಡಿರುವುದಿಲ್ಲ.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com