Back
Dakshina Kannada574199blurImage

Dakshina kannada - ಶರಣ್ ಪಂಪ್‌ವೆಲ್‌ ಅವರಿಗೆ ನ್ಯಾಯಾಲಯದಿಂದ ಜಾಮೀನು: ವಿಚಾರಣೆ ಬುಧವಾರ

Shamsheer
May 28, 2025 14:31:42
Karnataka
ವಿಶ್ವಹಿಂದೂ ಪರಿಷತ್ ನಾಯಕ ಶರಣ್ ಪಂಪ್‌ವೆಲ್ ಅವರಿಗೆ ಮಂಗಳವಾರ ರಾತ್ರಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ. ಕದ್ರಿ ಪೊಲೀಸರು ಶರಣ್ ಪಂಪ್‌ವೆಲ್‌ರನ್ನು ಬಂಧಿಸಿ ನಗರದ ನ್ಯಾಯಾಧೀಶರ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದಾಗ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿ ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದರು ಎಂದು ತಿಳಿದು ಬಂದಿದೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ದ.ಕ. ಜಿಲ್ಲೆ ಬಂದ್ ಗೆ ಕರೆ ನೀಡಿದ್ದ ಪ್ರಕರಣದಲ್ಲಿ ಅವರನ್ನು ಮಂಗಳವಾರ ಬಂಧಿಸಲಾಗಿತ್ತು.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com