Back
Mangalore: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ
Karnataka
ಬಂಟ್ವಾಳದ ಕೊಳತ್ತಮಜಲು ಬಳಿ ನಡೆದ ಅಬ್ದುಲ್ ರಹಿಮಾನ್ ಎಂಬ ಯುವಕನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದ.ಕ. ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಸೆಕ್ಷನ್ 163ರಂತೆ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ ಮೇ 27ರ ಸಂಜೆ 6 ಗಂಟೆಯಿಂದ ಮೇ 30ರ ಸಂಜೆ 6ರವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಮಂಗಳೂರು: ಬಂಟ್ವಾಳ ತಾಲೂಕಿನ ಕೊಳ್ತಮಜಲು ಸಮೀಪ ಅಬ್ದುಲ್ ರಹೀಮಾನ್ ಯಾನೆ ರಹೀಮ್ ಎಂಬವರನ್ನು ದುಷ್ಕರ್ಮಿಗಳು ಮಾರಕಾಯುಧಗಳಿಂದ ತೀವ್ರ ಹಲ್ಲೆ ನಡೆಸಿ ಕೊಲೆಗೈದ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಯಾವುದೇ ಘಟನೆ ನಡೆಯದಂತೆ ತಡೆಗಟ್ಟುವ ಉದ್ದೇಶಕ್ಕಾಗಿ ಮೇ 27 ಸಂಜೆ 6 ಗಂಟೆಯಿಂದ ಮೇ 30 ಸಂಜೆ 6 ಗಂಟೆ ತನಕ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇದಾಜ್
0
Report
For breaking news and live news updates, like us on Facebook or follow us on Twitter and YouTube . Read more on Latest News on Pinewz.com