Back
Dakshina Kannada575001blurImage

Mangalore - ಮದುವೆ ಬ್ರೋಕರ್ ಸುಲೈಮಾನ್ ಹತ್ಯೆಗೆ ಕಾರಣವಾದ ವೈವಾಹಿಕ ಭಿನ್ನಾಭಿಪ್ರಾಯ

Shamsheer
May 23, 2025 14:30:32
Mangaluru, Karnataka
ಮ್ಯಾರೇಜ್‌ ಬ್ರೋಕರ್ ರೋರ್ವರನ್ನು ಮಾರಕಾಸ್ತ್ರದಿಂದ ಇರಿದು ಹತ್ಯೆ ಮಾಡಿದ ಘಟನೆ ಮಂಗಳೂರು ನಗರದ ಹೊರವಲಯದ ವಳಚ್ಚಿಲ್ ಪದವು ಎಂಬಲ್ಲಿ ರಾತ್ರಿ ನಡೆದಿದೆ. ವಾಮಂಜೂರು ನಿವಾಸಿ ಸುಲೈಮಾನ್ ಕೊಲೆಯಾದ ವ್ಯಕ್ತಿ. ಆರೋಪಿಯನ್ನು ವಳಚ್ಚಿಲ್ ನಿವಾಸಿ ಮುಸ್ತಫಾ ಎಂದು ಗುರುತಿಸಲಾಗಿದೆ. ಕೊಲೆಗೀಡಾದ ಸುಲೈಮಾನ್ ರ ಇಬ್ಬರು ಪುತ್ರರಾದ ರಿಯಾಬ್ ಮತ್ತು ಸಿಯಾಬ್ ಗಾಯಗೊಂಡಿದ್ದಾರೆ. ಮದುವೆ ದಲ್ಲಾಳಿಯಾಗಿ ಕೆಲಸ ಮಾಡುತ್ತಿದ್ದ ಮೃತ ಸುಲೈಮಾನ್ ಎಂಟು ತಿಂಗಳ ಹಿಂದೆ ಆರೋಪಿ ಮುಸ್ತಫಾ (30) ಮತ್ತು ಶಹನಾಜ್ ಎಂಬ ಮಹಿಳೆಯ ಮದುವೆಗೆ ಅನುಕೂಲ ಮಾಡಿಕೊಟ್ಟಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ನಂತರದ ಇವ್ರ ಮಧ್ಯೆ ವೈವಾಹಿಕ ಭಿನ್ನಾಭಿಪ್ರಾಯದಿಂದಾಗಿ ಎರಡು ತಿಂಗಳ ಮೊದಲು ಶಹನಾಜ್ ತನ್ನ ಹೆತ್ತವರ ಮನೆಗೆ ಮರಳಿದ್ದಳು. ಇದು ಮುಸ್ತಫಾ ಮತ್ತು ಸುಲೈಮಾನ್ ನಡುವೆ ಉದ್ವಿಗ್ನತೆಗೆ ಕಾರಣವಾಗಿತ್ತು.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com