Back
Dakshina Kannada574325blurImage

Mangalore - ಆಪರೇಷನ್ ಸಿಂಧೂರ್: ಭಾರತದ ಪ್ರತಿಕ್ರಿಯೆಗಾಗಿ ಸರ್ವಪಕ್ಷಗಳ ನಿಯೋಗ ವಿದೇಶಕ್ಕೆ

Shamsheer
May 22, 2025 16:43:58
Budoli, Karnataka
'ಆಪರೇಷನ್ ಸಿಂಧೂರ್' ಕಾರ್ಯಾಚರಣೆಯ ನಂತರದ ರಾಜತಾಂತ್ರಿಕ ಕಾರ್ಯತಂತ್ರದ ಭಾಗವಾಗಿ ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆ ಬಗ್ಗೆ ಜಾಗತಿಕ ಸಮುದಾಯಕ್ಕೆ ವಾಸ್ತವಾಂಶಗಳನ್ನು ವಿವರಿಸಲು ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಡಿಎಂಕೆ ಕನಿಮೊಳಿ ನೇತೃತ್ವದ ಸರ್ವಪಕ್ಷಗಳ ನಿಯೋಗವು ಇಂದು ಬೆಳಗ್ಗೆ ವಿದೇಶಕ್ಕೆ ಪ್ರಯಾಣ ಬೆಳೆಸಿದೆ. ಗುರುವಾರ ಬೆಳಗ್ಗೆ ದೆಹಲಿ ವಿಮಾನ ನಿಲ್ದಾಣ ಮೂಲಕ ಬೆಳಗ್ಗೆ 11 ಗಂಟೆಗೆ ಹೊರಟ ತಂಡದಲ್ಲಿ ಕ್ಯಾ. ಚೌಟ ಅವರ ಜತೆಗೆ ಡಿಎಂಕೆ ಪಕ್ಷದ ಸಂಸದೆ ಕನಿಮೋಳಿ, ಸಮಾಜವಾದಿ ಪಕ್ಷದ ರಾಜೀವ್ ರೈ, ನ್ಯಾಷನಲ್‌ ಕಾನ್ಫರೆನ್ಸ್‌ ಸಂಸದ ಮಿಯಾನ್ ಅಲ್ತಾಫ್ ಅಹ್ಮದ್, ಆರ್‌ಜೆಡಿ ಪಕ್ಷದ ಪ್ರೇಮ್ ಚಂದ್ ಗುಪ್ತಾ, ಎಎಪಿ ಪಕ್ಷದ ಅಶೋಕ್ ಮಿತ್ತಲ್, ನೇಪಾಳದ ಮಾಜಿ ರಾಯಭಾರಿ ಮಂಜೀವ್ ಪುರಿ ಹಾಗೂ ಫ್ರಾನ್ಸ್‌ನ ಮಾಜಿ ರಾಯಭಾರಿ ಜಾವೇದ್ ಅಶ್ರಫ್ ಈ ನಿಯೋಗದಲ್ಲಿದ್ದಾರೆ. ಈ ನಿಯೋಗವು ಮೊದಲು ರಷ್ಯಾ ದೇಶಕ್ಕೆ ತೆರಳುತ್ತಿದೆ.
0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com