Back
Dakshina Kannada575013blurImage

Mangalore: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿಯ ಬಂಧನ

Shamsheer
May 20, 2025 05:57:02
Mangaluru, Karnataka

ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ದೂರುದಾರರಿಂದ 1,65,000/- ಹಣವನ್ನು ಪಡೆದು ಅಲ್ಲದೇ ಸಾಕಷ್ಟು ಯುವಕರಿಗೆ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಸುಮಾರು 1 ಕೋಟಿ 82 ಲಕ್ಷ ರೂಪಾಯಿ ಹಣವನ್ನು ಪಡೆದು ನಂಬಿಕೆ ದ್ರೋಹ ವಂಚಿಸಿದ್ದಕ್ಕಾಗಿ ಮಂಗಳೂರು ನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಸಿಸಿಬಿ ಘಟಕದಲ್ಲಿ ತನಿಖೆಯಲ್ಲಿರುತ್ತದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಂಬಯಿಯ ವಾಸಿ ಮಸೀವುಲ್ಲಾ ಅತಿವುಲ್ಲಾ ಖಾನ್ ಎಂಬಾತನನ್ನು ಹೆಚ್ಚಿನ ತನಿಖೆ ಸಲುವಾಗಿ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿದೆ. ಈ ಮೇಲಿನ ಆರೋಪಿಯ ವಿರುದ್ದ ಈಗಾಗಲೇ ಯಾವುದೇ ರಹದಾರಿ ಪಡೆಯದೇ ಕಂಪೆನಿ ತೆರೆದು ವಿದೇಶದಲ್ಲಿ ಉದ್ಯೋಗ ಕೊಡಿಸುವ ಬಗ್ಗೆ ಇಮಿಗ್ರೇಷನ್ ಅಧಿಕಾರಿಗಳಿಂದ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ 2024 ನೇ ಡಿಸೆಂಬರ್ ನಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ. ಈ ಮೇಲಿನ ಎರಡೂ ಪ್ರಕರಣಗಳು ಮಂಗಳೂರು.

0
Report

For breaking news and live news updates, like us on Facebook or follow us on Twitter and YouTube . Read more on Latest News on Pinewz.com