ಕಡಲನಗರದಲ್ಲಿ ಬೀದಿ ಬದಿ ವ್ಯಾಪಾರಿಗಳ ಮೇಲೆ ಹುಲಿ ದಾಳಿn
ಅನಧಿಕೃತ ಬೀದಿ ಅಂಗಡಿಗಳನ್ನು ತೆಗೆಯಲು ಮಂಗಳೂರು ಪಾಲಿಕೆಯಿಂದ ಆಪರೇಷನ್ ಟೈಗರ್ ಮುಂದುವರೆದಿದೆ. ಮಂಗಳೂರು ನಗರದ ಆರ್ಟಿಒ ಬಳಿಯಿಂದ ಕಾರ್ಯಾಚರಣೆ ಆರಂಭವಾಗಿದ್ದು, ಸ್ಟೇಟ್ ಬ್ಯಾಂಕ್ನ ಮೀನು ಮಾರುಕಟ್ಟೆ ಬಳಿಯ ಫುಟ್ಪಾತ್ ಅತಿಕ್ರಮಣ ಮಾಡಿ ನಿರ್ಮಿಸಿದ್ದ ತರಕಾರಿ ಅಂಗಡಿ ಸೇರಿದಂತೆ ಹಲವು ಅಂಗಡಿಗಳನ್ನು ಜೆಸಿಬಿ ಸಹಾಯದಿಂದ ತೆರವು ಮಾಡಲಾಯಿತು. ಪಾಲಿಕೆ ಮೇಯರ್ ಸುಧೀರ್ ಶೆಟ್ಟಿ ಹಾಗೂ ಆಯುಕ್ತ ಸಿ.ಎಲ್. ಆನಂದ್ ಅವರ ಸೂಚನೆಯಂತೆ ನಿಯಮ ಬಾಹಿರವಾಗಿ ವ್ಯಾಪಾರ ಮಾಡುತ್ತಿರುವ ಬೀದಿ ಬದಿ ವ್ಯಾಪಾರಿಗಳನ್ನು ತೆಗೆದುಹಾಕುವ ಅಭಿಯಾನ ಆರಂಭಿಸಲಾಗಿದೆ.
For breaking news and live news updates, like us on Facebook or follow us on Twitter and YouTube . Read more on Latest News on Pinewz.com
ಎರಡು ಸಾವಿರ ರೂಪಾಯಿಗಾಗಿ ನಡೆದ ಜಗಳದಲ್ಲಿ ವ್ಯಕ್ತಿಯೋರ್ವನ ಹೊಟ್ಟೆಗೆ ಕತ್ತರಿ ತಾಗಿದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ನಗರದ ಕುಂಚನೂರ್ ಕಾಂಪ್ಲೆಕ್ಸ್ ಬಳಿ ಜರುಗಿದೆ.ಗಾಯಗೊಂಡ ವ್ಯಕ್ತಿಯನ್ನ ಶ್ರೀಧರ ಟರ್ಕಿ(39) ಎಂದು ಗುರ್ತಿಸಲಾಗಿದೆ. ಗಾಯಾಳುವನ್ನ ಜಮಖಂಡಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಇನ್ನು ವೃತ್ತಿಯಲ್ಲಿ ಟೇಲರ್ ಆಗಿರುವ ಕುಮಾರ ಬಕ್ರೆ ಅವರು ಹೊಟ್ಟೆಗೆ ಕತ್ತರಿ ತಾಗಿಸಿದ್ದಾರೆ ಎಂದು ತಿಳಿದುಬಂದಿದೆ.ಬಾಕಿ ಹಣದ ವಿಚಾರವಾಗಿ ವಾಗ್ವಾದ ನಡೆದು ಕತ್ತರಿ ಇತಿತವಾಗಿದೆ.ಕುಮಾರ್ ಎನ್ನುವ ವ್ಯಕ್ತಿಯನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ